ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.
ಆ ಭಾಗದಲ್ಲಿ ಬಹು ವರ್ಷಗಳಿಂದ ರಸ್ತೆ ಬೇಡಿಕೆ ಇತ್ತು. ಇಷ್ಟು ವರ್ಷ ಯಾರಿಂದಲೂ ಆ ಭಾಗದ ರಸ್ತೆ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಶಾಸಕರು ಮುತುವರ್ಜಿ ವಹಿಸಿ ಸ್ಥಳೀಯರ ಜೊತೆ ಮಾತುಕತೆ ನಡೆಸಿ ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಿದ್ದು ಮಾತ್ರವಲ್ಲದೆ ರಸ್ತೆ ಕಾಮಗಾರಿಗೆ ತಕ್ಷಣಕ್ಕೆ 5 ಲಕ್ಷ ರೂ ಅನುದಾನವನ್ನು ಒದಗಿಸಿದ್ದಾರೆ. ಇದಕ್ಕಾಗಿ ಆ ಪ್ರದೇಶದಲ್ಲಿ ಶಾಸಕರಿಗೆ ಅಭಿನಂದನೆ ಸಲ್ಲಿಸಿ ಹಾಕಲಾಗಿದ್ದ ಬ್ಯಾನರನ್ನು ಹರಿದು ಹಾಕಿದ್ದಾರೆ. ಕೃತ್ಯ ಎಸಗಿದ ವಿಘ್ನ ಸಂತೋಷಿಗಳನ್ನು ತಕ್ಷಣ ಬಂಧಿಸಬೇಕು ಇಲ್ಲವಾದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ್ ಕಲ್ಲಾರೆ ತಿಳಿಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ರಾಕೇಶ್ ಬಡಗನ್ನೂರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…