ಪುರಾತನ ಸಂಪ್ರದಾಯ ಮತ್ತು ಭಕ್ತಿಭಾವವನ್ನು ಇಂದಿಗೂ ಜೀವಂತವಾಗಿಟ್ಟಿರುವ ಮಂಚಿ ಗೋಪಾಲಕೃಷ್ಣ ದೇವಸ್ಥಾನ, ಭಕ್ತಿ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಕಂಗೊಳಿಸುತ್ತಿದೆ.
ಮಂಚಿ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 108 ದಿನಗಳ ಸಂಧ್ಯಾ ಭಜನೆ, ಶ್ರೀ ರಂಗಪೂಜೆ, ಅನ್ನಸಂತರ್ಪಣೆ ಸೇವೆಯ ಮಂಗಳೋತ್ಸವ ಮತ್ತು 108 ಎಲೆಗಳ ಮಹಾರಂಗಪೂಜೆ ಡಿ. 20 ಮತ್ತು 21ರಂದು ನಡೆಯಲಿದೆ. ಡಿ. 20 ಶನಿವಾರದಂದು ಸೂರ್ಯಾಸ್ತದಿಂದ ಮರುದಿನ ಸೂರ್ಯಾಸ್ತದವರೆಗೆ ವಿವಿಧ ಭಜನಾ ಸಹಕಾರದೊಂದಿಗೆ ಏಕಾಹ ಭಜನೆ ನಡೆಯಲಿದೆ.
ಡಿ. 21 ರಂದು ಬೆಳಿಗ್ಗೆ 9-30 ರಿಂದ ಸೀಯಾಳಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಲಿದೆ. ಸಾಯಂಕಾಲ 7 ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಎಡನೀರು ಮಠ ಕಾಸರಗೋಡು ಇಲ್ಲಿನ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳು ಆರ್ಶೀವಚನ ನೀಡಲಿದ್ದಾರೆ. ಸಾಂದೀಪನಿ ಸಾಧನಾಶ್ರಮ, ಶ್ರೀ ಕ್ಷೇತ್ರ ಕೇಮಾರು ಇಲ್ಲಿನ ಪರಮಪೂಜ್ಯ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ದೀಪ ಪ್ರಜ್ವಲನೆಯನ್ನು ಮಾಡಲಿದ್ದಾರೆ.
ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಂಚಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೈಯೂರು ನಾರಾಯಣ ಭಟ್ಟರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಂಬೈಯ ಉದ್ಯಮಿ ಸದಾನಂದ ಶೆಟ್ಟಿ ಮಂಡಾಡಿಗುತ್ತು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಜಗನ್ನಾಥ ಚೌಟ ಬದಿಗುಡ್ಡೆ, ಹಾಗೂ ಯೋಗಿಶ್ ಕುಮಾರ್ ನಡಕ್ಕರ ಬೆಳ್ತಂಗಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇನ್ನು ರಾತ್ರಿ 8-30ಕ್ಕೆ ದೇವರಿಗೆ ಮಹಾರಂಗಪೂಜೆ ನಡೆಯಲಿದೆ. ಡಿ. 21 ರಂದು ನಡೆಯುವ ಎಲ್ಲಾ ದೃಶ್ಯಾವಳಿಗಳು ನಿಮ್ಮ ನೆಚ್ಚಿನ ಅಭಿಮತ ಯೂಟ್ಯೂಬ್ ಚಾನಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…