ಪುರಾತನ ಸಂಪ್ರದಾಯ ಮತ್ತು ಭಕ್ತಿಭಾವವನ್ನು ಇಂದಿಗೂ ಜೀವಂತವಾಗಿಟ್ಟಿರುವ ಮಂಚಿ ಗೋಪಾಲಕೃಷ್ಣ ದೇವಸ್ಥಾನ, ಭಕ್ತಿ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಕಂಗೊಳಿಸುತ್ತಿದೆ.
ಮಂಚಿ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 108 ದಿನಗಳ ಸಂಧ್ಯಾ ಭಜನೆ, ಶ್ರೀ ರಂಗಪೂಜೆ, ಅನ್ನಸಂತರ್ಪಣೆ ಸೇವೆಯ ಮಂಗಳೋತ್ಸವ ಮತ್ತು 108 ಎಲೆಗಳ ಮಹಾರಂಗಪೂಜೆ ಡಿ. 20 ಮತ್ತು 21ರಂದು ನಡೆಯಲಿದೆ. ಡಿ. 20 ಶನಿವಾರದಂದು ಸೂರ್ಯಾಸ್ತದಿಂದ ಮರುದಿನ ಸೂರ್ಯಾಸ್ತದವರೆಗೆ ವಿವಿಧ ಭಜನಾ ಸಹಕಾರದೊಂದಿಗೆ ಏಕಾಹ ಭಜನೆ ನಡೆಯಲಿದೆ.
ಡಿ. 21 ರಂದು ಬೆಳಿಗ್ಗೆ 9-30 ರಿಂದ ಸೀಯಾಳಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಲಿದೆ. ಸಾಯಂಕಾಲ 7 ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಎಡನೀರು ಮಠ ಕಾಸರಗೋಡು ಇಲ್ಲಿನ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳು ಆರ್ಶೀವಚನ ನೀಡಲಿದ್ದಾರೆ. ಸಾಂದೀಪನಿ ಸಾಧನಾಶ್ರಮ, ಶ್ರೀ ಕ್ಷೇತ್ರ ಕೇಮಾರು ಇಲ್ಲಿನ ಪರಮಪೂಜ್ಯ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ದೀಪ ಪ್ರಜ್ವಲನೆಯನ್ನು ಮಾಡಲಿದ್ದಾರೆ.
ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಂಚಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೈಯೂರು ನಾರಾಯಣ ಭಟ್ಟರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಂಬೈಯ ಉದ್ಯಮಿ ಸದಾನಂದ ಶೆಟ್ಟಿ ಮಂಡಾಡಿಗುತ್ತು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಜಗನ್ನಾಥ ಚೌಟ ಬದಿಗುಡ್ಡೆ, ಹಾಗೂ ಯೋಗಿಶ್ ಕುಮಾರ್ ನಡಕ್ಕರ ಬೆಳ್ತಂಗಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇನ್ನು ರಾತ್ರಿ 8-30ಕ್ಕೆ ದೇವರಿಗೆ ಮಹಾರಂಗಪೂಜೆ ನಡೆಯಲಿದೆ. ಡಿ. 21 ರಂದು ನಡೆಯುವ ಎಲ್ಲಾ ದೃಶ್ಯಾವಳಿಗಳು ನಿಮ್ಮ ನೆಚ್ಚಿನ ಅಭಿಮತ ಯೂಟ್ಯೂಬ್ ಚಾನಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…