ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ್ದರು. ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು, ಅಪಾರವಾದ ಬಳಗವನ್ನು ಗಳಿಸಿಕೊಂಡಿದ್ದರು. ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಾರ್ಯಕಲಾಪಗಳ ವರದಿಗಾಗಿ ತೆರಳಿದ್ದ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದರು. ಕೆಎಸ್ಆರ್ಟಿಸಿ ಬಸ್ ನಿಂದ ಇಳಿದು, ಬಾಗಲೂರಿನಲ್ಲಿರುವ ತಮ್ಮ ಮನೆ ತಲುಪಲು ಬಿಎಂಟಿಸಿ ಬಸ್ ಹತ್ತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತವಾಗಿದೆ. ಸಹಪ್ರಯಾಣಿಕರು ಉಪಚರಿಸಿದ ಹೊರತಾಗಿಯೂ ಬಸ್ ನಲ್ಲಿಯೇ ನಿಧನ ಹೊಂದಿದ್ದಾರೆ. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು. ಪ್ರೆಸ್ ಕ್ಲಬ್ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ರಮೇಶ್ಪಾಳ್ಯ, ಸಂಘದ ಪದಾಧಿಕಾರಿಗಳು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ವರದಿಗಾರರ ಕೂಟದ ಅಧ್ಯಕ್ಷ ಆರ್.ಟಿ.ವಿಠಲ ಮೂರ್ತಿ ಮತ್ತಿತರ ಹಿರಿಯ ಪತ್ರಕರ್ತರು ಶೋಕ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…