ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಮಾದಕ ವಸ್ತುವಿನ ಮಾರಾಟದಲ್ಲಿ ತೊಡಗಿದ್ದ ಆರೋಪಿಯ ಬಂಧನ..!

ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್‌ಡಿಎಮ್‌ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಕೇರಳದ ಉಪ್ಪಳ, ಮಂಗಲ್ಪಾಡಿ ನಿವಾಸಿ ಶೇಖ್ ಮೊಹಮ್ಮದ್ ಕೈಫ್ ಎಂಬಾತನನ್ನು ಉಳ್ಳಾಲ ಪೊಲೀಸರು ಸೋಮವಾರದಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ,ಕೃತ್ಯದಲ್ಲಿ ತೊಡಗಿದ್ದ ಮತ್ತಿಬ್ಬರು ಪೆಡ್ಲರ್‌ಗಳು ಪರಾರಿಯಾಗಿದ್ದಾರೆ.

ಬಂಧಿತ ಆರೋಪಿ ಮೊಹಮ್ಮದ್ ಕೈಫ್ ನಿಂದ 55,000/- ರೂಪಾಯಿ ಬೆಲೆ ಬಾಳುವ ನಿಷೇಧಿತ 11 ಗ್ರಾಂ ಎಮ್‌ಡಿಎಮ್‌ಎ ಕ್ರಿಸ್ಟಲ್ ಮತ್ತು ಕೃತ್ಯಕ್ಕೆ ಬಳಸಿದ್ದ 1 ತೂಕ ಮಾಪನ, 500 ರೂ.ನಗದು ಮತ್ತು 1 ಮೊಬೈಲ್ ಫೋನನ್ನು ಪೊಲೀಸರು ಜಪ್ತಿಗೊಳಿಸಿದ್ದಾರೆ. ಸ್ಥಳದಲ್ಲಿದ್ದ ಮತ್ತಿಬ್ಬರು ಡ್ರಗ್ ಪೆಡ್ಲರ್‌ಗಳಾದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರು ಪರಾರಿಯಾಗಿದ್ದಾರೆ. ಮೊಹಮ್ಮದ್ ಕೈಫ್ ಎಂಬಾತನು ವಿಲಾಸಿ ಜೀವನ ನಡೆಸಲು ಉಪ್ಪಳದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರೊAದಿಗೆ ಸೇರಿ ಕೆ.ಸಿ ರೋಡ್ ಫಲಾಹ್ ಶಾಲಾ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪರಿಚಯಸ್ಥ ಗಿರಾಕಿಗಳಿಗೆ ಎಮ್‌ಡಿಎಮ್‌ಎ ಕ್ರಿಸ್ಟಲನ್ನು ಪೂರೈಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಬೈಕಲ್ಲಿ ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಶೇಖ್ ಮೊಹಮ್ಮದ್ ಕೈಫ್‌ನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!