ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ.
ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್, ಮನೋಜ್ ಮೃತಪಟ್ವ ಯುವಕರಾಗಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಯುವಕರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಮೃತ ನಾಲ್ವರು ಯುವಕರು ನರಸಿಂಹಮೂರ್ತಿಗೆ ಸೇರಿದ ಬೈಕಿನಲ್ಲಿ ಹೊರಟಿದ್ದು, ಇನ್ನೇನು ಅಜ್ಜವಾರ ಗ್ರಾಮಕ್ಕೆ ಹೈವೇಯಿಂದ ಬಲತಿರುವು ಪಡೆದುಕೊಳ್ಳಬೇಕಿತ್ತು. ಅಷ್ಟರಲ್ಲಿ ಟಿಪ್ಪರ್ ಲಾರಿ ಅಡ್ಡ ಬಂದ ಪರಿಣಾಮ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಬೈಕ್ ಅಪ್ಪಚ್ಚಿಯಾಗಿದೆ. ಇನ್ನು ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಮತ್ತೊಂದೆಡೆ ನರಸಿಂಹಮೂರ್ತಿ ಕಳೆದ ಆರು ತಿಂಗಳ ಹಿಂದೆಯಷ್ಟೇ ಪ್ರೇಮ ವಿವಾಹವಾಗಿದ್ದು, ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ. ಇನ್ನು ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…
ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು…