ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಟಿ ಮಹೋತ್ಸವದ ದಿನದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದಾರೆ.

ಅಂದಾಜು ಪ್ರಕಾರ ಸುಮಾರು 30 ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕರಿಸಿದ್ದು, ದೂರದ ಊರುಗಳಾದ ಬೆಂಗಳೂರು, ಮೈಸೂರು, ಕೋಲಾರ, ದೊಡ್ಡಬಳ್ಳಾಪುರ, ಕಾರವಾರ, ಹುಬ್ಬಳ್ಳಿ, ದಾವಣಗೆರೆ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ತುಮಕೂರು ಮುಂತಾದಡೆಗಳಿಂದ ಬಹಳಷ್ಟು ಭಕ್ತರು ಸರಕಾರಿ ಹಾಗೂ ಖಾಸಗಿ ಬಸ್ಸಿನಲ್ಲಿ ಶ್ರೀ ಕ್ಷೇತ್ರಕ್ಕೆ ನಿನ್ನೆ ರಾತ್ರಿಯಿಂದಲೇ ಆಗಮಿಸಿದ್ದಾರೆ.

ಕಿರುಷಷ್ಟಿ ಮಹೋತ್ಸವದ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ ವಿಶೇಷ ಪೂಜೆ ಮಧ್ಯಾಹ್ನ ಮಹಾಪೂಜೆ ರಾತ್ರಿ ರಥ ಬೀದಿಯಲ್ಲಿ ರಥೋತ್ಸವ ನಡೆಯುವುದರಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದರು, ಅಲ್ಲದೆ ಡಿಸೆಂಬರ್ ಅಂತ್ಯದ ರಜಾ ದಿನಗಳಲ್ಲಿ ಸರ್ಕಾರಿ ನೌಕರರ ಕುಟುಂಬದವರು ಶಾಲಾ ಕಾಲೇಜು ವಿದ್ಯಾರ್ಥಿಗಳು ತಂಡೋಪ ತಂಡವಾಗಿ ಕುಕ್ಕೆಗೆ ಆಗಮಿಸಿದ್ದಾರೆ.



