ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಟಿ ಮಹೋತ್ಸವದ ದಿನದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದಾರೆ.
ಅಂದಾಜು ಪ್ರಕಾರ ಸುಮಾರು 30 ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕರಿಸಿದ್ದು, ದೂರದ ಊರುಗಳಾದ ಬೆಂಗಳೂರು, ಮೈಸೂರು, ಕೋಲಾರ, ದೊಡ್ಡಬಳ್ಳಾಪುರ, ಕಾರವಾರ, ಹುಬ್ಬಳ್ಳಿ, ದಾವಣಗೆರೆ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ತುಮಕೂರು ಮುಂತಾದಡೆಗಳಿಂದ ಬಹಳಷ್ಟು ಭಕ್ತರು ಸರಕಾರಿ ಹಾಗೂ ಖಾಸಗಿ ಬಸ್ಸಿನಲ್ಲಿ ಶ್ರೀ ಕ್ಷೇತ್ರಕ್ಕೆ ನಿನ್ನೆ ರಾತ್ರಿಯಿಂದಲೇ ಆಗಮಿಸಿದ್ದಾರೆ.
ಕಿರುಷಷ್ಟಿ ಮಹೋತ್ಸವದ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ ವಿಶೇಷ ಪೂಜೆ ಮಧ್ಯಾಹ್ನ ಮಹಾಪೂಜೆ ರಾತ್ರಿ ರಥ ಬೀದಿಯಲ್ಲಿ ರಥೋತ್ಸವ ನಡೆಯುವುದರಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದರು, ಅಲ್ಲದೆ ಡಿಸೆಂಬರ್ ಅಂತ್ಯದ ರಜಾ ದಿನಗಳಲ್ಲಿ ಸರ್ಕಾರಿ ನೌಕರರ ಕುಟುಂಬದವರು ಶಾಲಾ ಕಾಲೇಜು ವಿದ್ಯಾರ್ಥಿಗಳು ತಂಡೋಪ ತಂಡವಾಗಿ ಕುಕ್ಕೆಗೆ ಆಗಮಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…