ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಲ್ಲಮಜಲು-ಸೆರ್ಕಳ ರಸ್ತೆಯ ವಾಸವ್ಯವಿಲ್ಲದ ದಿ.ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಪತ್ತೆಯಾಗಿತ್ತು.
ಇದು ಹಲವು ಸಮಯಗಳ ಹಿಂದೆ ನಾಪತ್ತೆಯಾಗಿದ್ದ ಕೊಳ್ನಾಡು ನಿವಾಸಿ ಪೂವಪ್ಪ ಪೂಜಾರಿ ಅವರ ಶವ ಎಂದು ಗುರುತು ಪತ್ತೆಹಚ್ಚಲಾಗಿದೆ. ಸ್ಥಳೀಯರಿಗೆ ದುರ್ವಾಸನೆ ಬಂದ ಕಾರಣ ಹುಡುಕಾಡಿದಾಗ ವಾಸ್ತವ್ಯವಿಲ್ಲದ ಪಾಳು ಬಿದ್ದ ಮನೆಯಂಗಳದ ಬಾವಿಯಲ್ಲಿ ಶವ ಕಂಡುಬಂದಿತ್ತು. ತಕ್ಷಣವೇ ಸ್ಥಳೀಯರು ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದವರು ಸ್ಥಳಕ್ಕಾಗಮಿಸಿ 57 ಅಡಿ ಆಳದ ಬಾವಿಯೊಳಗೆ ಇದ್ದ ಶವ ಮೇಲಕ್ಕೆತ್ತಿದ್ದಾರೆ. ಫ್ರೆಂಡ್ಸ್ ವಿಟ್ಲ ತಂಡದ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದು, ಸ್ಥಳೀಯರು ಸಹಕಾರ ನೀಡಿದ್ದಾರೆ. ಪೂವಪ್ಪ ಪೂಜಾರಿ ಆತ್ಮಹತ್ಯೆ ಬಗ್ಗೆ ಪತ್ನಿ ಸುಶೀಲಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…