ಬಿಸ್ಕೆಟ್ ಕೊಡ್ತ್ತೇನೆ ಎಂದು ಕರೆದು ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಐದು ವರ್ಷದ ಮಗುವಿಗೆ ಬಿಸ್ಕೆಟ್ ಕೊಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಮುಫಿಜುಲ್ ಶೇಖ್ (26) ಎಂಬಾತನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರಿಯಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡದಲ್ಲಿ ಮುಫಿಜುಲ್ ಕೆಲಸ ಮಾಡುತ್ತಿದ್ದ. ಸಂತ್ರಸ್ತ ಬಾಲಕಿಯ ಪೋಷಕರು ಕೂಡ ಇದೇ ಕಟ್ಟಡದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಅವರು ಕೂಡ ಮುರ್ಷಿದಾಬಾದ್ ಮೂಲದವರು. ಜುಲೈ 26 ರಂದು ಮಧ್ಯಾಹ್ನ, ಮುಫಿಜುಲ್ ಸಂತ್ರಸ್ತ ಬಾಲಕಿಯ ಪೋಷಕರಿಗೆ ಬಿಸ್ಕೆಟ್ ನೀಡುವ ಸಲುವಾಗಿ ಬಾಲಕಿಯನ್ನು ತನ್ನ ಕೋಣೆಗೆ ಕರೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದ. ಬಾಲಕಿಯನ್ನು ಕೋಣೆಗೆ ಕರೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದಾನೆ.
ತನ್ನ ಕೋಣೆಗೆ ಮರಳಿದ ನಂತರ ಹುಡುಗಿ ಹೊಟ್ಟೆ ನೋವಿನ ಬಗ್ಗೆ ದೂರು ನೀಡಲು ಪ್ರಾರಂಭಿಸಿದಳು. ಪೋಷಕರು ಆಕೆಯನ್ನು ಪಡುಬಿದ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಬಾಲಕಿಯ ದೈಹಿಕ ಪರೀಕ್ಷೆ ಬಳಿಕ ವೈದ್ಯರು ಲೈಂಗಿಕ ದೌರ್ಜನ್ಯದ ಶಂಕೆ ವ್ಯಕ್ತಪಡಿಸಿದ್ದಾರೆ.
ನಂತರ ಪಡುಬಿದ್ರಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆಗಳ ಬೆಂಗಾವಲಿನಲ್ಲಿ ಬಾಲಕಿಯನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯ ವೈದ್ಯರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ.
ಆರೋಪಿ ಮುಫಿಜುಲ್ನನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ. ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಪು ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಪೂವಯ್ಯ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…