ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿಯಾದ ಕಳ್ಳರು…!

ಪಟ್ಟಣದ ಹೊರವಲಯದ ಚಿನ್ನಾಭರಣ ಅಂಗಡಿಗೆ ಕನ್ನ ಹಾಕಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಹಾಡು ಹಗಲು ಸಂಭವಿಸಿದೆ.

ಹುಣಸೂರಿನ ಬಸ್ ನಿಲ್ದಾಣದ ಹಿಂಭಾಗವಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಅಂಗಡಿಯ ಮೇಲೆ ಐದು ಮಂದಿ ಮುಸುಕುದಾರಿಗಳು ಅಂಗಡಿ ಮ್ಯಾನೇಜರ್ ಅಜ್ಗರ್ ಮೇಲೆ ರಿವಾಲ್ವಾರ್‌ನಿಂದ ಗುಂಡು ಹಾರಿಸಿ ದರೋಡೆ ಮಾಡಿದ್ದಾರೆ. ಸುಮಾರು 4-5 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ದರೋಡೆಕೋರರು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ತಪ್ಪಿಸಿಕೊಂಡ ಅಜ್ಗರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ದರೋಡೆಕೋರರು ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಬ್ಯಾಗ್‌ಗಳಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ.

ಘಟನೆಯ ಸಮಯದಲ್ಲಿ ಅಂಗಡಿಯಲ್ಲಿ ಕೆಲವು ಗ್ರಾಹಕರು ಮತ್ತು ಸಿಬ್ಬಂದಿ ಇದ್ರು, ದರೋಡೆಕೋರರು ಎಲ್ಲರನ್ನೂ ಬೆದರಿಕೆ ಹಾಕಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ನಂತರ ಒಬ್ಬ ದರೋಡೆಕೋರ ಮಾತ್ರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ. ಇತರರು ಮುಸುಕು ಧರಿಸಿದ್ದು, ಈ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ದರೋಡೆಕೋರರ ಬಂಧನದ ಕಾರ್ಯಾಚರಣೆಗೆ ಇಳಿದಿದ್ದಾರೆ.

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!