ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿಯಾದ ಕಳ್ಳರು…!

ಪಟ್ಟಣದ ಹೊರವಲಯದ ಚಿನ್ನಾಭರಣ ಅಂಗಡಿಗೆ ಕನ್ನ ಹಾಕಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಹಾಡು ಹಗಲು ಸಂಭವಿಸಿದೆ.

ಹುಣಸೂರಿನ ಬಸ್ ನಿಲ್ದಾಣದ ಹಿಂಭಾಗವಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಅಂಗಡಿಯ ಮೇಲೆ ಐದು ಮಂದಿ ಮುಸುಕುದಾರಿಗಳು ಅಂಗಡಿ ಮ್ಯಾನೇಜರ್ ಅಜ್ಗರ್ ಮೇಲೆ ರಿವಾಲ್ವಾರ್‌ನಿಂದ ಗುಂಡು ಹಾರಿಸಿ ದರೋಡೆ ಮಾಡಿದ್ದಾರೆ. ಸುಮಾರು 4-5 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ದರೋಡೆಕೋರರು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ತಪ್ಪಿಸಿಕೊಂಡ ಅಜ್ಗರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ದರೋಡೆಕೋರರು ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಬ್ಯಾಗ್‌ಗಳಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ.

ಘಟನೆಯ ಸಮಯದಲ್ಲಿ ಅಂಗಡಿಯಲ್ಲಿ ಕೆಲವು ಗ್ರಾಹಕರು ಮತ್ತು ಸಿಬ್ಬಂದಿ ಇದ್ರು, ದರೋಡೆಕೋರರು ಎಲ್ಲರನ್ನೂ ಬೆದರಿಕೆ ಹಾಕಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ನಂತರ ಒಬ್ಬ ದರೋಡೆಕೋರ ಮಾತ್ರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ. ಇತರರು ಮುಸುಕು ಧರಿಸಿದ್ದು, ಈ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ದರೋಡೆಕೋರರ ಬಂಧನದ ಕಾರ್ಯಾಚರಣೆಗೆ ಇಳಿದಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!