ಮಂಗಳೂರು – ಬೆಂಗಳೂರು ರೈಲು ಮಾರ್ಗದ ಮೈಸೂರು ವಿಭಾಗದ ನೈರುತ್ಯ ರೈಲ್ವೆಯಲ್ಲಿ ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣಗೊಂಡಿದೆ.
ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಇದು ರೈಲು ಮೂಲಸೌಕರ್ಯವನ್ನು ಬಲಪಡಿಸುವ ಮಹತ್ವದ ಮೈಲಿಗಲ್ಲಾಗಿದೆ. ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ 55 ಕಿ.ಮೀ. ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿದೆ.
ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258 ಸೇತುವೆಗಳು, 108 ತೀಕ್ಷ್ಣ ವಕ್ರಗಳು ಇರುವುದರ ಜೊತೆಗೆ, ಭೂಕುಸಿತಗಳಿಗೆ ಹೆಚ್ಚು ಒಳಪಡುವ ಪ್ರದೇಶವಾಗಿರುವುದರಿಂದ, ವಿದ್ಯುದೀಕರಣ ಕಾರ್ಯವು ಅತ್ಯಂತ ಸಂಕೀರ್ಣವಾಗಿತ್ತು. ವಿದ್ಯುದೀಕರಣ ಕಾರ್ಯವು 2023ರ ಡಿಸೆಂಬರ್ 1ರಂದು ಆರಂಭಗೊಂಡು, ರೂ.93.55 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದೆ. ಈ ಯೋಜನೆಯಡಿ ಮಾರ್ಗದೊಳಗೆ ಐದು ಸ್ವಿಚಿಂಗ್ ಸ್ಟೇಷನ್ಗಳ ನಿರ್ಮಾಣ ಹಾಗೂ ಸಂಪೂರ್ಣ ವಿಭಾಗದಲ್ಲಿ ಮೇಲ್ಮೈ ವಿದ್ಯುದೀಕರಣ ಕಾರ್ಯ ಕೈಗೊಳ್ಳಲಾಗಿದೆ. ಮೇಲ್ಮೈ ವಿದ್ಯುತ್ ವ್ಯವಸ್ಥೆಯನ್ನು ಗರಿಷ್ಠ 120 ಕಿ.ಮೀ. ಪ್ರತಿ ಗಂಟೆ ವೇಗಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದ್ದು, ಎರಡು ವಿದ್ಯುತ್ ಕಂಬಗಳ ನಡುವಿನ ಗರಿಷ್ಠ ಅಂತರವನ್ನು 67.5 ಮೀಟರ್ಗೆ ಮಿತಿಗೊಳಿಸಲಾಗಿದೆ. ಇದರಿಂದ ಕಾರ್ಯಾಚರಣಾ ಸುರಕ್ಷತೆ ಮತ್ತು ವಿಶ್ವಾಸಾರ್ಹತೆ ಖಚಿತಗೊಂಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…