ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬೈಕ್ ಹಾಗೂ ಕಾರ್ ಮಧ್ಯೆ ಅಪಘಾತ ; ಬೈಕ್ ಸವಾರ ಮೃ*ತ್ಯು…..!

ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಪ್ರಾಥಮಿಕ ಅರೋಗ್ಯ ಕೇಂದ್ರದ ಸಮೀಪ ನಡೆದ ಬೈಕ್ ಹಾಗೂ ಕಾರ್ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.

ಕುಕ್ಕಾಜೆ ನಿವಾಸಿ ಇಮ್ರಾನ್ ಮೃತಪಟ್ಟವರು. ಅವರು ಟಾಟಾ ಕಂಪನಿಯ ಡಿಶ್ ರಿಪೇರಿ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯ ನಿಮಿತ್ತ ತೆರಳಿದವರು ವಾಪಾಸು ಬಿ.ಸಿ.ರೋಡ್ ಕಡೆ ಬರುತ್ತಿದ್ರು, ಮಂಗಳೂರು ಕಡೆಯಿಂದ ಪೊಲೀಸ್ ಓರ್ವರು ಚಲಾಯಿಸುತ್ತಿದ್ದ ನ್ಯಾನೋ ಕಾರ್ ನಿಯಂತ್ರಣ ತಪ್ಪಿ ಹೆಗ್ಗಡೆಬೆಟ್ಟು ಮನೆ ಬಳಿ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಇಮ್ರಾನ್ ಬೈಕ್ ನಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ತತ್ ಕ್ಷಣ ಸ್ಥಳೀಯರು ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಮೂಲತಃ ಮಾರ್ನಬೈಲ್‌ನವರಾದ ಅವರು ಕುಕ್ಕಾಜೆಯಲ್ಲಿ ಮನೆ ನಿರ್ಮಿಸಿದ್ದರು. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!