ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಪ್ರಾಥಮಿಕ ಅರೋಗ್ಯ ಕೇಂದ್ರದ ಸಮೀಪ ನಡೆದ ಬೈಕ್ ಹಾಗೂ ಕಾರ್ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಕುಕ್ಕಾಜೆ ನಿವಾಸಿ ಇಮ್ರಾನ್ ಮೃತಪಟ್ಟವರು. ಅವರು ಟಾಟಾ ಕಂಪನಿಯ ಡಿಶ್ ರಿಪೇರಿ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯ ನಿಮಿತ್ತ ತೆರಳಿದವರು ವಾಪಾಸು ಬಿ.ಸಿ.ರೋಡ್ ಕಡೆ ಬರುತ್ತಿದ್ರು, ಮಂಗಳೂರು ಕಡೆಯಿಂದ ಪೊಲೀಸ್ ಓರ್ವರು ಚಲಾಯಿಸುತ್ತಿದ್ದ ನ್ಯಾನೋ ಕಾರ್ ನಿಯಂತ್ರಣ ತಪ್ಪಿ ಹೆಗ್ಗಡೆಬೆಟ್ಟು ಮನೆ ಬಳಿ ಬೈಕ್ಗೆ ಢಿಕ್ಕಿ ಹೊಡೆದಿದೆ. ಇದರಿಂದ ಇಮ್ರಾನ್ ಬೈಕ್ ನಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ತತ್ ಕ್ಷಣ ಸ್ಥಳೀಯರು ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಮೂಲತಃ ಮಾರ್ನಬೈಲ್ನವರಾದ ಅವರು ಕುಕ್ಕಾಜೆಯಲ್ಲಿ ಮನೆ ನಿರ್ಮಿಸಿದ್ದರು. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…