ಉಪ್ಪಿನಂಗಡಿ: ಮೃತದೇಹವೊಂದು ತೇಲಿ ಹೋದ ಬಗ್ಗೆ ಸುದ್ದಿ ಹರಡಿದ್ದು, ಗೃಹ ರಕ್ಷಕದಳದವರನ್ನೊಳಗೊಂಡ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದ ಸದಸ್ಯರು ನದಿಯಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಮೃತದೇಹ ಪತ್ತೆಯಾಗದೇ ಅವರು ವಾಪಸ್ ಮರಳಿದ ಘಟನೆ ಜು.27ರಂದು ಸಂಜೆ ನಡೆದಿದೆ. ದೇವಾಲಯದ ಹಿಂಬದಿಯಲ್ಲಿರುವ ಕುಮಾರಧಾರ ನದಿಯಲ್ಲಿ ಮೃತದೇಹವೊಂದು ತೇಲಿ ಹೋಗುತ್ತಿರುವುದನ್ನು ಸಾರ್ವಜನಿಕರು ಕಂಡಿದ್ದು, ಕೂಡಲೇ ಅಲ್ಲೇ ಸಮೀಪದಲ್ಲೇ ಇರುವ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದವರಿಗೆ ವಿಷಯ ಮುಟ್ಟಿಸಿದರು.
ಸಾರ್ವಜನಿಕರು ನೀಡಿದ ಮಾಹಿತಿಯನ್ನಧಾರಿಸಿ ತಕ್ಷಣವೇ ಕಾರ್ಯಪ್ರವೃತರಾದ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದ ಸದಸ್ಯರು ತಮ್ಮಲ್ಲಿರುವ ರಬ್ಬರ್ ಬೋಟಿನಲ್ಲಿ ನದಿಯಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ತನಕ ಹೋಗಿ ಹುಡುಕಾಟ ನಡೆಸಿದರೂ ಅವರಿಗೆ ಮೃತದೇಹ ಪತ್ತೆಯಾಗದ್ದರಿಂದ ಮತ್ತೆ ವಾಪಸ್ ಮರಳಿದರು.
ಆ ಬಳಿಕ ಈ ವಿಷಯ ಚರ್ಚೆಗೆ ಆಸ್ಪದ ನೀಡಿದ್ದು, ಕೆಲವರು ಕುಮಾರಧಾರ ಸೇತುವೆಯಿಂದ ಯಾರಾದರೂ ಹಾರಿರಬಹುದು ಎಂದರೆ, ಇನ್ನು ಕೆಲವರು ಎಲ್ಲೋ ನೀರಿಗೆ ಬಿದ್ದವರ ಮೃತದೇಹವಾಗಿರಬಹುದೆಂದು ಶಂಕಿಸುತ್ತಿದ್ದಾರೆ. ನದಿಯಲ್ಲಿ ಮೃತದೇಹ ತೇಲುತ್ತಿದೆ ಎಂದು ಹೇಳಿದ ಸಾರ್ವಜನಿಕರು ಬೇರೇನ್ನನ್ನೋ ಮೃತದೇಹವೆಂದು ಭ್ರಮಿಸಿದ್ದಾರೋ ಎಂಬ ಸಂಶಯನೂ ಇಲ್ಲಿ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ., ಉಪ್ಪಿನಂಗಡಿ ಕಂದಾಯ ಹೋಬಳಿಯ ಉಪತಹಶೀಲ್ದಾರ್ ಚೆನ್ನಪ್ಪ ಗೌಡ, ತಂಡದಲ್ಲಿ ಗ್ರಾಮ ಸಹಾಯಕ ಯತೀಶ್ ಮಡಿವಾಳ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ಹುಡುಕಾಟದ ಗೃಹರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್, ಎಎಸ್ಎಲ್ ಜನಾರ್ದನ ಆಚಾರ್ಯ, ಅಣ್ಣು, ಡೀಕಯ್ಯ ಇದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…