ಉಪ್ಪಿನಂಗಡಿ: ಮೃತದೇಹವೊಂದು ತೇಲಿ ಹೋದ ಬಗ್ಗೆ ಸುದ್ದಿ ಹರಡಿದ್ದು, ಗೃಹ ರಕ್ಷಕದಳದವರನ್ನೊಳಗೊಂಡ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದ ಸದಸ್ಯರು ನದಿಯಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಮೃತದೇಹ ಪತ್ತೆಯಾಗದೇ ಅವರು ವಾಪಸ್ ಮರಳಿದ ಘಟನೆ ಜು.27ರಂದು ಸಂಜೆ ನಡೆದಿದೆ. ದೇವಾಲಯದ ಹಿಂಬದಿಯಲ್ಲಿರುವ ಕುಮಾರಧಾರ ನದಿಯಲ್ಲಿ ಮೃತದೇಹವೊಂದು ತೇಲಿ ಹೋಗುತ್ತಿರುವುದನ್ನು ಸಾರ್ವಜನಿಕರು ಕಂಡಿದ್ದು, ಕೂಡಲೇ ಅಲ್ಲೇ ಸಮೀಪದಲ್ಲೇ ಇರುವ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದವರಿಗೆ ವಿಷಯ ಮುಟ್ಟಿಸಿದರು.
ಸಾರ್ವಜನಿಕರು ನೀಡಿದ ಮಾಹಿತಿಯನ್ನಧಾರಿಸಿ ತಕ್ಷಣವೇ ಕಾರ್ಯಪ್ರವೃತರಾದ ಪ್ರಾಕೃತಿಕ ವಿಕೋಪ ರಕ್ಷಣಾ ತಂಡದ ಸದಸ್ಯರು ತಮ್ಮಲ್ಲಿರುವ ರಬ್ಬರ್ ಬೋಟಿನಲ್ಲಿ ನದಿಯಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ತನಕ ಹೋಗಿ ಹುಡುಕಾಟ ನಡೆಸಿದರೂ ಅವರಿಗೆ ಮೃತದೇಹ ಪತ್ತೆಯಾಗದ್ದರಿಂದ ಮತ್ತೆ ವಾಪಸ್ ಮರಳಿದರು.
ಆ ಬಳಿಕ ಈ ವಿಷಯ ಚರ್ಚೆಗೆ ಆಸ್ಪದ ನೀಡಿದ್ದು, ಕೆಲವರು ಕುಮಾರಧಾರ ಸೇತುವೆಯಿಂದ ಯಾರಾದರೂ ಹಾರಿರಬಹುದು ಎಂದರೆ, ಇನ್ನು ಕೆಲವರು ಎಲ್ಲೋ ನೀರಿಗೆ ಬಿದ್ದವರ ಮೃತದೇಹವಾಗಿರಬಹುದೆಂದು ಶಂಕಿಸುತ್ತಿದ್ದಾರೆ. ನದಿಯಲ್ಲಿ ಮೃತದೇಹ ತೇಲುತ್ತಿದೆ ಎಂದು ಹೇಳಿದ ಸಾರ್ವಜನಿಕರು ಬೇರೇನ್ನನ್ನೋ ಮೃತದೇಹವೆಂದು ಭ್ರಮಿಸಿದ್ದಾರೋ ಎಂಬ ಸಂಶಯನೂ ಇಲ್ಲಿ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ., ಉಪ್ಪಿನಂಗಡಿ ಕಂದಾಯ ಹೋಬಳಿಯ ಉಪತಹಶೀಲ್ದಾರ್ ಚೆನ್ನಪ್ಪ ಗೌಡ, ತಂಡದಲ್ಲಿ ಗ್ರಾಮ ಸಹಾಯಕ ಯತೀಶ್ ಮಡಿವಾಳ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ಹುಡುಕಾಟದ ಗೃಹರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್, ಎಎಸ್ಎಲ್ ಜನಾರ್ದನ ಆಚಾರ್ಯ, ಅಣ್ಣು, ಡೀಕಯ್ಯ ಇದ್ದರು.
ಕಾರವಾರ - ಮಂಗಳೂರು- ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು…
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…