ಜನ ಮನದ ನಾಡಿ ಮಿಡಿತ

Advertisement

ಕಂಬಳದಲ್ಲಿ ಅವಹೇಳನ ಮಾಡಿದವರು ಮಿಯಾರು ಕಂಬಳದಲ್ಲಿ ಕ್ಷಮೆ ಕೇಳಬೇಕು; ನಮ್ಮ ಕಂಬಳ ಟೀಂ ದುಬೈ!

ಮಂಗಳೂರು ಕಂಬಳದಲ್ಲಿ ಕಂಬಳ ಉದ್ಘೋಷಕರಾದ ಕಂಬಳ ಕ್ಷೇತ್ರದ ಭೀಷ್ಮ ಎಂಬ ಖ್ಯಾತಿ ಪಡೆದಿರುವ ಗುಣಪಾಲ ಕಡಂಬರವರಿಗೆ ಆದ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ ಹಾಗೂ ಇದು ತುಳುನಾಡಿನ ಕಂಬಳ ಕ್ಷೇತ್ರಕ್ಕೆ ಆದ ಅಗೌರವ ಎಂದು ಯುಎಇಯಲ್ಲಿ ಇರುವ ಕಂಬಳ ಅಭಿಮಾನಿಗಳು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಮರಳು ಭೂಮಿಯಲ್ಲಿ ದುಡಿಯುತ್ತಿರುವ ನಾವು ಕಂಬಳವನ್ನು ಅತಿ ಪ್ರೀತಿ ಹಾಗೂ ಭಕ್ತಿ ಪೂರ್ವಕವಾಗಿ ಕಂಬಳ ಆರಂಭದಿಂದ ಅಂತ್ಯದವರೆಗೆ ಮೊಬೈಲ್ ಫೋನ್ ಅಥವಾ ಇನ್ನಿತರ ಪರದೆಯಲ್ಲಿ ನೋಡುವ ನಮಗೆ ಕಂಬಳದ ಸವಿಯನ್ನು ಇನ್ನೂ ಹೆಚ್ಚಿಸುವವರು ಕಂಬಳ ಉದ್ಘೋಷಕರು. ಅಂತಹ ಉದ್ಘೋಷಕರಿಗೆ ಈ ರೀತಿಯ ಅವಮಾನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದರು. ಕಂಬಳದಲ್ಲಿ ಗುಣಪಾಲ ಕಡಂಬರ ಧ್ವನಿಯೇ ಒಂದು ವಿಶೇಷ ಆಕರ್ಷಣೆಯಾಗಿದೆ. ಅವರ ಧ್ವನಿಯಿಂದ ಕಂಬಳದ ಇತಿಹಾಸವನ್ನು ಕೇಳಲು ಕಂಬಳ ಅಭಿಮಾನಿಗಳು ನಿರೀಕ್ಷೆಯಲ್ಲಿರುತ್ತಾರೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕಡಂಬರವರಿಗೆ ಮಾಡಿದ ಅವಮಾನವನ್ನು ನಾವು ಎಂದಿಗೂ ಸಹಿಸುವುದಿಲ್ಲ. ಮಂಗಳೂರು ಕಂಬಳದಲ್ಲಿ ಅವಮಾನವನ್ನು ಮಾಡಿದವರು ನಾಳೆಯ ಮೀಯಾರಿನ ಕಂಬಳದಲ್ಲಿ ಕ್ಷಮೆ ಕೇಳಬೇಕು ಹಾಗೂ ಮುಂದಿನ ದಿನಗಳಲ್ಲಿ ಕಂಬಳ ಕ್ಷೇತ್ರಗಳಲ್ಲಿ ಇಂತಹ ಘಟನೆಗಳು ನಡೆಯಬಾರದು ಇದರ ಬಗ್ಗೆ ಕಂಬಳ ಜಿಲ್ಲಾ ಸಮಿತಿ ಮತ್ತು ಕಂಬಳ ರಾಜ್ಯ ಅಸೋಸಿಯೇಷನ್ ತುರ್ತು ಕ್ರಮವನ್ನು ತೆಗೆಯಬೇಕು ಎಂದು ನಮ್ಮ ಕಂಬಳ ಟೀಂ ದುಬೈಯ ಎಲ್ಲಾ ಸದಸ್ಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!