ಮಂಗಳೂರು ಕಂಬಳದಲ್ಲಿ ಕಂಬಳ ಉದ್ಘೋಷಕರಾದ ಕಂಬಳ ಕ್ಷೇತ್ರದ ಭೀಷ್ಮ ಎಂಬ ಖ್ಯಾತಿ ಪಡೆದಿರುವ ಗುಣಪಾಲ ಕಡಂಬರವರಿಗೆ ಆದ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ ಹಾಗೂ ಇದು ತುಳುನಾಡಿನ ಕಂಬಳ ಕ್ಷೇತ್ರಕ್ಕೆ ಆದ ಅಗೌರವ ಎಂದು ಯುಎಇಯಲ್ಲಿ ಇರುವ ಕಂಬಳ ಅಭಿಮಾನಿಗಳು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಮರಳು ಭೂಮಿಯಲ್ಲಿ ದುಡಿಯುತ್ತಿರುವ ನಾವು ಕಂಬಳವನ್ನು ಅತಿ ಪ್ರೀತಿ ಹಾಗೂ ಭಕ್ತಿ ಪೂರ್ವಕವಾಗಿ ಕಂಬಳ ಆರಂಭದಿಂದ ಅಂತ್ಯದವರೆಗೆ ಮೊಬೈಲ್ ಫೋನ್ ಅಥವಾ ಇನ್ನಿತರ ಪರದೆಯಲ್ಲಿ ನೋಡುವ ನಮಗೆ ಕಂಬಳದ ಸವಿಯನ್ನು ಇನ್ನೂ ಹೆಚ್ಚಿಸುವವರು ಕಂಬಳ ಉದ್ಘೋಷಕರು. ಅಂತಹ ಉದ್ಘೋಷಕರಿಗೆ ಈ ರೀತಿಯ ಅವಮಾನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದರು. ಕಂಬಳದಲ್ಲಿ ಗುಣಪಾಲ ಕಡಂಬರ ಧ್ವನಿಯೇ ಒಂದು ವಿಶೇಷ ಆಕರ್ಷಣೆಯಾಗಿದೆ. ಅವರ ಧ್ವನಿಯಿಂದ ಕಂಬಳದ ಇತಿಹಾಸವನ್ನು ಕೇಳಲು ಕಂಬಳ ಅಭಿಮಾನಿಗಳು ನಿರೀಕ್ಷೆಯಲ್ಲಿರುತ್ತಾರೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕಡಂಬರವರಿಗೆ ಮಾಡಿದ ಅವಮಾನವನ್ನು ನಾವು ಎಂದಿಗೂ ಸಹಿಸುವುದಿಲ್ಲ. ಮಂಗಳೂರು ಕಂಬಳದಲ್ಲಿ ಅವಮಾನವನ್ನು ಮಾಡಿದವರು ನಾಳೆಯ ಮೀಯಾರಿನ ಕಂಬಳದಲ್ಲಿ ಕ್ಷಮೆ ಕೇಳಬೇಕು ಹಾಗೂ ಮುಂದಿನ ದಿನಗಳಲ್ಲಿ ಕಂಬಳ ಕ್ಷೇತ್ರಗಳಲ್ಲಿ ಇಂತಹ ಘಟನೆಗಳು ನಡೆಯಬಾರದು ಇದರ ಬಗ್ಗೆ ಕಂಬಳ ಜಿಲ್ಲಾ ಸಮಿತಿ ಮತ್ತು ಕಂಬಳ ರಾಜ್ಯ ಅಸೋಸಿಯೇಷನ್ ತುರ್ತು ಕ್ರಮವನ್ನು ತೆಗೆಯಬೇಕು ಎಂದು ನಮ್ಮ ಕಂಬಳ ಟೀಂ ದುಬೈಯ ಎಲ್ಲಾ ಸದಸ್ಯರು ಆಗ್ರಹಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…