ಮಂಗಳೂರು ಕಂಬಳದಲ್ಲಿ ಕಂಬಳ ಉದ್ಘೋಷಕರಾದ ಕಂಬಳ ಕ್ಷೇತ್ರದ ಭೀಷ್ಮ ಎಂಬ ಖ್ಯಾತಿ ಪಡೆದಿರುವ ಗುಣಪಾಲ ಕಡಂಬರವರಿಗೆ ಆದ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ ಹಾಗೂ ಇದು ತುಳುನಾಡಿನ ಕಂಬಳ ಕ್ಷೇತ್ರಕ್ಕೆ ಆದ ಅಗೌರವ ಎಂದು ಯುಎಇಯಲ್ಲಿ ಇರುವ ಕಂಬಳ ಅಭಿಮಾನಿಗಳು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಮರಳು ಭೂಮಿಯಲ್ಲಿ ದುಡಿಯುತ್ತಿರುವ ನಾವು ಕಂಬಳವನ್ನು ಅತಿ ಪ್ರೀತಿ ಹಾಗೂ ಭಕ್ತಿ ಪೂರ್ವಕವಾಗಿ ಕಂಬಳ ಆರಂಭದಿಂದ ಅಂತ್ಯದವರೆಗೆ ಮೊಬೈಲ್ ಫೋನ್ ಅಥವಾ ಇನ್ನಿತರ ಪರದೆಯಲ್ಲಿ ನೋಡುವ ನಮಗೆ ಕಂಬಳದ ಸವಿಯನ್ನು ಇನ್ನೂ ಹೆಚ್ಚಿಸುವವರು ಕಂಬಳ ಉದ್ಘೋಷಕರು. ಅಂತಹ ಉದ್ಘೋಷಕರಿಗೆ ಈ ರೀತಿಯ ಅವಮಾನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದರು. ಕಂಬಳದಲ್ಲಿ ಗುಣಪಾಲ ಕಡಂಬರ ಧ್ವನಿಯೇ ಒಂದು ವಿಶೇಷ ಆಕರ್ಷಣೆಯಾಗಿದೆ. ಅವರ ಧ್ವನಿಯಿಂದ ಕಂಬಳದ ಇತಿಹಾಸವನ್ನು ಕೇಳಲು ಕಂಬಳ ಅಭಿಮಾನಿಗಳು ನಿರೀಕ್ಷೆಯಲ್ಲಿರುತ್ತಾರೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕಡಂಬರವರಿಗೆ ಮಾಡಿದ ಅವಮಾನವನ್ನು ನಾವು ಎಂದಿಗೂ ಸಹಿಸುವುದಿಲ್ಲ. ಮಂಗಳೂರು ಕಂಬಳದಲ್ಲಿ ಅವಮಾನವನ್ನು ಮಾಡಿದವರು ನಾಳೆಯ ಮೀಯಾರಿನ ಕಂಬಳದಲ್ಲಿ ಕ್ಷಮೆ ಕೇಳಬೇಕು ಹಾಗೂ ಮುಂದಿನ ದಿನಗಳಲ್ಲಿ ಕಂಬಳ ಕ್ಷೇತ್ರಗಳಲ್ಲಿ ಇಂತಹ ಘಟನೆಗಳು ನಡೆಯಬಾರದು ಇದರ ಬಗ್ಗೆ ಕಂಬಳ ಜಿಲ್ಲಾ ಸಮಿತಿ ಮತ್ತು ಕಂಬಳ ರಾಜ್ಯ ಅಸೋಸಿಯೇಷನ್ ತುರ್ತು ಕ್ರಮವನ್ನು ತೆಗೆಯಬೇಕು ಎಂದು ನಮ್ಮ ಕಂಬಳ ಟೀಂ ದುಬೈಯ ಎಲ್ಲಾ ಸದಸ್ಯರು ಆಗ್ರಹಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…