ಆಧಾರಿತ ಫಸಲ್ ಭೀಮಾ ಯೋಜನೆಯಡಿಯಲ್ಲಿ ಈ ಬಾರಿ ಫಲಾನುಭವಿ ರೈತರಿಗೆ ಸರಿಯಾದ ರೀತಿಯಲ್ಲಿ ವಿಮಾ ಪರಿಹಾರ ದೊರೆಯದೇ ಇರುವುದರ ವಿರುದ್ಧ ಜ. 12ರಂದು ಕಡಬದ ತಹಶೀಲ್ದಾರ್ ಕಚೇರಿಯ ಮುಂದೆ ಮಲೆನಾಡು ಜನ ಹಿತ ರಕ್ಷಣ ವೇದಿಕೆಯ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ದಾಮೋದರ ಗುಂಡ್ಯ ಹೇಳಿದ್ದಾರೆ.

ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷಿಕರು ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಪ್ರತೀ ವರ್ಷ ಹೆಕ್ಟೇರ್ ಒಂದಕ್ಕೆ 6,400 ರೂ. ಮೊತ್ತವನ್ನು ಪ್ರೀಮಿಯಂ ರೂಪದಲ್ಲಿ ವಿಮಾ ಕಂಪೆನಿಗೆ ಪಾವತಿ ಮಾಡುತ್ತಾರೆ. ಅತಿವೃಷ್ಟಿ, ಅನಾವೃಷ್ಟಿ ತಾಪಮಾನ ಏರಿಕೆ -ಇಳಿಕೆ ಮತ್ತು ಚಳಿಯ ಪ್ರಮಾಣ ಇವುಗಳನ್ನು ಆಧರಿಸಿ ಫಸಲಿನಲ್ಲಿ ಆಗಬಹುದಾದ ವ್ಯತ್ಯಾಸಗಳಿಗೆ ಸರಿಯಾಗಿ ಬೆಳೆ ನಷ್ಟವನ್ನು ಪರಿಗಣಿಸಿ ವಿಮಾ ಕಂಪೆನಿಯು ಪರಿಹಾರವನ್ನು ಪಾವತಿಸಬೇಕು. ಆದರೆ ಈ ಬಾರಿ ಸರಿಯಾದ ರೀತಿಯಲ್ಲಿ ವಿಮಾ ಪರಿಹಾರ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.



