ಆಧಾರಿತ ಫಸಲ್ ಭೀಮಾ ಯೋಜನೆಯಡಿಯಲ್ಲಿ ಈ ಬಾರಿ ಫಲಾನುಭವಿ ರೈತರಿಗೆ ಸರಿಯಾದ ರೀತಿಯಲ್ಲಿ ವಿಮಾ ಪರಿಹಾರ ದೊರೆಯದೇ ಇರುವುದರ ವಿರುದ್ಧ ಜ. 12ರಂದು ಕಡಬದ ತಹಶೀಲ್ದಾರ್ ಕಚೇರಿಯ ಮುಂದೆ ಮಲೆನಾಡು ಜನ ಹಿತ ರಕ್ಷಣ ವೇದಿಕೆಯ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ದಾಮೋದರ ಗುಂಡ್ಯ ಹೇಳಿದ್ದಾರೆ.
ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷಿಕರು ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಪ್ರತೀ ವರ್ಷ ಹೆಕ್ಟೇರ್ ಒಂದಕ್ಕೆ 6,400 ರೂ. ಮೊತ್ತವನ್ನು ಪ್ರೀಮಿಯಂ ರೂಪದಲ್ಲಿ ವಿಮಾ ಕಂಪೆನಿಗೆ ಪಾವತಿ ಮಾಡುತ್ತಾರೆ. ಅತಿವೃಷ್ಟಿ, ಅನಾವೃಷ್ಟಿ ತಾಪಮಾನ ಏರಿಕೆ -ಇಳಿಕೆ ಮತ್ತು ಚಳಿಯ ಪ್ರಮಾಣ ಇವುಗಳನ್ನು ಆಧರಿಸಿ ಫಸಲಿನಲ್ಲಿ ಆಗಬಹುದಾದ ವ್ಯತ್ಯಾಸಗಳಿಗೆ ಸರಿಯಾಗಿ ಬೆಳೆ ನಷ್ಟವನ್ನು ಪರಿಗಣಿಸಿ ವಿಮಾ ಕಂಪೆನಿಯು ಪರಿಹಾರವನ್ನು ಪಾವತಿಸಬೇಕು. ಆದರೆ ಈ ಬಾರಿ ಸರಿಯಾದ ರೀತಿಯಲ್ಲಿ ವಿಮಾ ಪರಿಹಾರ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…