ಬಿಹಾರದಿಂದ ಮಂಗಳೂರಿಗೆ ಗಾಂಜಾ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇವರು ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಿಹಾರ ರಾಜ್ಯದ ನಿವಾಸಿಗಳಾದ ಹಾಲಿ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್, ಬ್ರಿಜೇಶ್ ಶ್ರೀವತ್ಸ ಎಂದು ಗುರುತಿಸಲಾಗಿದೆ. ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.



