ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಿಹಾರದಿಂದ ಮಂಗಳೂರಿಗೆ ಗಾಂಜಾ ತಂದು ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ….!

ಬಿಹಾರದಿಂದ ಮಂಗಳೂರಿಗೆ ಗಾಂಜಾ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇವರು ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಿಹಾರ ರಾಜ್ಯದ ನಿವಾಸಿಗಳಾದ ಹಾಲಿ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್, ಬ್ರಿಜೇಶ್ ಶ್ರೀವತ್ಸ ಎಂದು ಗುರುತಿಸಲಾಗಿದೆ. ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!