ಬಿಹಾರದಿಂದ ಮಂಗಳೂರಿಗೆ ಗಾಂಜಾ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಇವರು ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಿಹಾರ ರಾಜ್ಯದ ನಿವಾಸಿಗಳಾದ ಹಾಲಿ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್, ಬ್ರಿಜೇಶ್ ಶ್ರೀವತ್ಸ ಎಂದು ಗುರುತಿಸಲಾಗಿದೆ. ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…