ಸುಹಾಸ್ ಶೆಟ್ಟಿ ರೀತಿ ಟ್ರೇಟೆಂಟ್.. ಎಂದು ಮುಸ್ಲಿಂ ಪೇಜ್ ಹೆಸರಲ್ಲಿ ಸಂಘ ಪರಿವಾರದ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಆರೋಪಿಗಳಿಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.
ಬಜಪೆಯಲ್ಲಿ ಗೋಮಾಂಸ ಒಯ್ಯುತ್ತಿದ್ದ ತಂದೆ, ಮಗಳನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರ ಫೋಟೊ ಹಾಕಿ ಮಿತಿ ಮೀರುತ್ತಿರುವ ಸಂಘಗಳ ಅಟ್ಟಹಾಸ ಎಂದು ಬರೆದು ಪ್ರಚೋದನಕಾರಿ ಸಂದೇಶ ಹಾಕಿದ ಬಗ್ಗೆ ಮಂಗಳೂರು ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿದ್ದಾರೆ. ಅವರನ್ನು ಏನು ಮಾಡುವುದಿಲ್ಲ ಅವರನ್ನು ಕೇಳುವವರು ಇಲ್ಲ ಹೇಳುವವರಿಲ್ಲ ಎಂಬ ಧೈರ್ಯ ಅವರಿಗಿದೆ ನಾವು ಆಡಿದ್ದೇ ಆಟ ಎಂಬಂತಾಗಿದೆ ಇನ್ನು ಗೋಮಾಂಸಕ್ಕೆ ಸಂಬಂಧಿಸಿ ಸಂಘ ಪರಿವಾರದ ಭಯೋತ್ಪಾದಕರ ದಾಳಿ ಈಗೀಗ ಹೆಚ್ಚುತ್ತಲೇ ಇದೆ, ಅವರಿಗೆ ಕಾನೂನಿನ ಭಯವಿಲ್ಲ ಎಂದು ಪೋಸ್ಟ್ ನಲ್ಲಿ ಹೇಳಲಾಗಿದೆ. ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿ. 27 ರಂದು ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬಾತ ತನ್ನ ಮಗಳ ಜೊತೆಗೆ ಸ್ಕೂಟರ್ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ, ಸುಮಿತ್ ಮತ್ತು ರಜತ್ ನಾಯಕ್ ಎಂಬವರು ತಡೆದು ನಿಲ್ಲಿಸಿ ಹಲ್ಲೆ ಮಾಡಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ. ಸದ್ರಿ ಘಟನೆಗೆ ಸಂಬಂಧಿಸಿದಂತೆ ಇನ್ ಸ್ಟಾ ಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮ್ ಲೀಡರ್ ಎಂಬ ಹೆಸರಲ್ಲಿ ಪ್ರಚೋದನಕಾರಿ ಸಂದೇಶ ಹಾಕಲಾಗಿದೆ. ಇಬ್ಬರು ಯುವಕರ ಪೋಟೋವನ್ನು ಹಾಕಲಾಗಿದೆ. ಇನ್ನು ಗೋಮಾಂಸ ತಿನ್ನುತ್ತೇವೆ, ಸಂಘಗಳೇ ಏನು ಮಾಡುತ್ತೀರಾ.. ಥೂ.. ನಿಮ್ಮ ಜನ್ಮಕ್ಕೆ. ಹದಿಹರೆಯದ ಮಕ್ಕಳನ್ನು ಕೂಡ ನೀವು ನೋಡುವುದಿಲ್ಲ. ನಿಮ್ಮ ಮನೆಯಲ್ಲಿ ಮಕ್ಕಳು ಇಲ್ಲವೇ.. ಸರ್ಕಾರ ಆದಷ್ಟು ಬೇಗ ಈ ನಾಯಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಎಂದೂ ಅದರಲ್ಲಿ ಹೇಳಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…