ಜನ ಮನದ ನಾಡಿ ಮಿಡಿತ

Advertisement

ಪಾವೂರು ಗ್ರಾಮದ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆದಿದೆ.

 

ಉಳ್ಳಾಲ : ಪಾವೂರು ಗ್ರಾಮದ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆದಿದೆ.

 

ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದಿದ್ದಾರೆ. ಬಳಿಕ ಮಾತನಾಡಿದ ಅವರು ಇಲ್ಲಿ ಖಾಸಗಿ ಜಾಗವೇ ಇರುವುದರಿಂದ ರಸ್ತೆ ನಿರ್ಮಾಣ ಸವಾಲಾಗಿತ್ತು. ಆದರೆ ಸ್ಥಳೀಯ ಹೃದಯ ವೈಶಾಲ್ಯವುಳ್ಳವರು ಜಾಗವನ್ನು ಬಿಟ್ಟುಕೊಟ್ಟ ಕಾರಣ ಸ್ಪೀಕರ್ ಬಳಿ ಮಾತುಕತೆ ನಡೆಸಿದಾಗ ಅವರೇ ಸ್ಥಳ ಪರಿಶೀಲಿಸಿ ಮೊದಲ ಹಂತದ ಕಾಮಗಾರಿಗೆ ಅನುದಾನ ನೀಡಿದ್ದಾರೆ ಎಂದರು. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್ ಮಾತನಾಡಿ, ಸ್ವಾತಂತ್ರ‍್ಯ ಬಂದು 78 ವರ್ಷ ಕಳೆದರೂ ದೋಟಕ್ಕೆ ರಸ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಶಾಸಕರು ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿ 40 ಕೋಟಿ ಅನುದಾನ ಮೀಸಲಿಟ್ಟಿದ್ದು ನಾಲ್ಕೈದು ತಿಂಗಳಲ್ಲಿ ಕೆಲಸ ಆರಂಭವಾಗಲಿದೆ. ಈಗ ಆಗುವ ರಸ್ತೆ ಗಾಡಿಗದ್ದೆ ಭಂಡಾರಮನೆ ಸಂಪರ್ಕ ಕಲ್ಪಿಸಲಿದೆ ಎಂದು ತಿಳಿಸಿದರು. ಇನ್ನು ಈ ಸಂಧರ್ಭದಲ್ಲಿ ಪಾವೂರು ಗ್ರಾಮ ಪಂಚಾಯಿತಿಯ ಸ್ಥಳೀಯ ಸದಸ್ಯರಾದ ರಿಯಾಝ್ ಅಹ್ಮದ್ ಪಾವೂರು, ರವಿಕಲಾ, ಮಾಜಿ ಸದಸ್ಯರಾದ ಚೆನ್ನಮ್ಮ, ಎಂ.ಪಿ.ಹಸನ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!