ಉಳ್ಳಾಲ : ಪಾವೂರು ಗ್ರಾಮದ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆದಿದೆ.
ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಅಜಿರುಳಿಯದಿಂದ ಪಾದೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸಗೈದಿದ್ದಾರೆ. ಬಳಿಕ ಮಾತನಾಡಿದ ಅವರು ಇಲ್ಲಿ ಖಾಸಗಿ ಜಾಗವೇ ಇರುವುದರಿಂದ ರಸ್ತೆ ನಿರ್ಮಾಣ ಸವಾಲಾಗಿತ್ತು. ಆದರೆ ಸ್ಥಳೀಯ ಹೃದಯ ವೈಶಾಲ್ಯವುಳ್ಳವರು ಜಾಗವನ್ನು ಬಿಟ್ಟುಕೊಟ್ಟ ಕಾರಣ ಸ್ಪೀಕರ್ ಬಳಿ ಮಾತುಕತೆ ನಡೆಸಿದಾಗ ಅವರೇ ಸ್ಥಳ ಪರಿಶೀಲಿಸಿ ಮೊದಲ ಹಂತದ ಕಾಮಗಾರಿಗೆ ಅನುದಾನ ನೀಡಿದ್ದಾರೆ ಎಂದರು. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್ ಮಾತನಾಡಿ, ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ದೋಟಕ್ಕೆ ರಸ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಶಾಸಕರು ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿ 40 ಕೋಟಿ ಅನುದಾನ ಮೀಸಲಿಟ್ಟಿದ್ದು ನಾಲ್ಕೈದು ತಿಂಗಳಲ್ಲಿ ಕೆಲಸ ಆರಂಭವಾಗಲಿದೆ. ಈಗ ಆಗುವ ರಸ್ತೆ ಗಾಡಿಗದ್ದೆ ಭಂಡಾರಮನೆ ಸಂಪರ್ಕ ಕಲ್ಪಿಸಲಿದೆ ಎಂದು ತಿಳಿಸಿದರು. ಇನ್ನು ಈ ಸಂಧರ್ಭದಲ್ಲಿ ಪಾವೂರು ಗ್ರಾಮ ಪಂಚಾಯಿತಿಯ ಸ್ಥಳೀಯ ಸದಸ್ಯರಾದ ರಿಯಾಝ್ ಅಹ್ಮದ್ ಪಾವೂರು, ರವಿಕಲಾ, ಮಾಜಿ ಸದಸ್ಯರಾದ ಚೆನ್ನಮ್ಮ, ಎಂ.ಪಿ.ಹಸನ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…