ಸುಬ್ರಹ್ಮಣ್ಯ : ಜನವರಿ 8 : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.
ಶೃತಿ ಅವರೊಂದಿಗೆ ಅವರ ಅಪ್ಪ, ಅಮ್ಮ, ಚಿಕ್ಕಮ್ಮ ಹಾಗೂ ಕುಟುಂಬಸ್ಥರು ಜೊತೆಗಿದ್ದರು. ಶ್ರೀ ದೇವಳದಲ್ಲಿ ಪಂಚಾಮೃತ ಮಹಾಅಭಿಷೇಕ ಸೇವೆ ಸಲ್ಲಿಸಿದರು. ಸತ್ಯನಾರಾಯಣ ಅಸ್ರನ್ನ ಅವರು ತೀರ್ಥ ಹಾಗೂ ಶ್ರೀ ದೇವರ ಪ್ರಸಾದ ನೀಡಿದರು. ಅಲ್ಲಿಂದ ಹೊ ಸಳಿಗಮ್ಮ ದೈವದ ಗುಡಿಯಲ್ಲಿ ದರ್ಶನ ಮಾಡಿದರು. ತದನಂತರ ಶ್ರೀ ದೇವಳದ ಆಡಳಿತ ಕಚೇರಿಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ ಇಂಜಾಡಿ ಅವರು ಶಾಲು ಹೊಂದಿಸಿ ಶೃತಿ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಅಜಿತ್ ಪಾಲೇರಿ,ಸೌಮ್ಯ ಭರತ್, ಲೀಲಾ ಮನಮೋಹನ್,ಪ್ರವೀಣ ರೈ, ಮಾಸ್ಟರ್ ಪ್ಲಾನ್ ಸಮಿತಿಯ ಅಚ್ಚುತ ಗೌಡ ಬಳ್ಪ, ಕಾರ್ಯ ನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ, ಸಹಾಯಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮರಾವ್ ಶಿಷ್ಟಾಚಾರ ವಿಭಾಗದ ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಶ್ರೀ ದೇವಳದ ಅಲ್ಲಿ ಭೋಜನ ಪ್ರಸಾದ ಸ್ವೀಕರಿಸಿ ತೆರಳಿದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…