ಉಡುಪಿ : ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರದಲ್ಲಿ ಸಂಭವಿಸಿದೆ.
ಮಟಪಾಡಿ ಗ್ರಾಮದಿಂದ ನೀಲಾವರ ಕಡೆ ಹೋಗುವ ಮಾರ್ಗದ ಅಕ್ಕ ಪಕ್ಕದ ರಸ್ತೆಗಳಲ್ಲಿ ಬೆಂಕಿ ಅಬ್ಬರ ಜೋರಾಗಿತ್ತು. ಜೆನಿತ್ ಡೈ ಮೇಕರ್ ಇಂಡಸ್ಟ್ರಿ ಸಮೀಪದ ರಸ್ತೆಯ ಅಕ್ಕಪಕ್ಕಗಳಲ್ಲಿ ಬೆಂಕಿ ಕಾಣಿಸಿಕೊಂಡು, ನಂತರ ಹಬ್ಬಲಾರಂಭಿಸಿದೆ. ಪರಿಸರದಲ್ಲಿದ್ದ ಪೈನಾಪಲ್ ತೋಟ ಹಾಗೂ ಒಣಹುಲ್ಲು, ಗಿಡ ಗಂಟಿಗಳು ಸುಟ್ಟು ಕರಕಲಾಗಿವೆ. ಪರಿಸರದ ಅಡಿಕೆ ತೋಟ, ತೆಂಗು, ಹಲಸು ಗಿಡಗಳು ಕೂಡ ಸುಟ್ಟು ಹೋಗಿವೆ . ಪರಿಸರದಲ್ಲಿ ಸಣ್ಣಪುಟ್ಟ ಕೈಗಾರಿಕೆಗಳಿದ್ದು ಸಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳೀಯರು ಮತ್ತು ಅಗ್ನಿಶಾಮಕದಳದ ಕಾರ್ಯಾಚರಣೆಯಿಂದ ಅನಾಹುತ ತಪ್ಪಿದೆ. ಇತ್ತೀಚಿನ ದಿನಗಳಲ್ಲಿ ಬ್ರಹ್ಮಾವರ ಪರಿಸರದಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು ತಾಲೂಕು ಕೇಂದ್ರದಲ್ಲಿ ಶಾಶ್ವತ ಅಗ್ನಿಶಾಮಕ ಠಾಣೆ ಬೇಕೆಂಬ ಬೇಡಿಕೆ ಹೆಚ್ಚಿದೆ. ಯಾವುದೇ ಅವಘಡ ಸಂಭವಿಸಿದರೆ, ಉಡುಪಿ ಇಂದ ಅಗ್ನಿಶಾಮಕ ವಾಹನ ಹೋಗಬೇಕಾಗಿದೆ.ಇದು ಸಾರ್ವಜನಿಕ ರ ಆಕ್ರೋಶ ಕ್ಕೆ ಕಾರಣವಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…