ಉಡುಪಿ : ಪೈನಾಪಲ್ ತೋಟ ಹಾಗೂ ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರದಲ್ಲಿ ಸಂಭವಿಸಿದೆ.
ಮಟಪಾಡಿ ಗ್ರಾಮದಿಂದ ನೀಲಾವರ ಕಡೆ ಹೋಗುವ ಮಾರ್ಗದ ಅಕ್ಕ ಪಕ್ಕದ ರಸ್ತೆಗಳಲ್ಲಿ ಬೆಂಕಿ ಅಬ್ಬರ ಜೋರಾಗಿತ್ತು. ಜೆನಿತ್ ಡೈ ಮೇಕರ್ ಇಂಡಸ್ಟ್ರಿ ಸಮೀಪದ ರಸ್ತೆಯ ಅಕ್ಕಪಕ್ಕಗಳಲ್ಲಿ ಬೆಂಕಿ ಕಾಣಿಸಿಕೊಂಡು, ನಂತರ ಹಬ್ಬಲಾರಂಭಿಸಿದೆ. ಪರಿಸರದಲ್ಲಿದ್ದ ಪೈನಾಪಲ್ ತೋಟ ಹಾಗೂ ಒಣಹುಲ್ಲು, ಗಿಡ ಗಂಟಿಗಳು ಸುಟ್ಟು ಕರಕಲಾಗಿವೆ. ಪರಿಸರದ ಅಡಿಕೆ ತೋಟ, ತೆಂಗು, ಹಲಸು ಗಿಡಗಳು ಕೂಡ ಸುಟ್ಟು ಹೋಗಿವೆ . ಪರಿಸರದಲ್ಲಿ ಸಣ್ಣಪುಟ್ಟ ಕೈಗಾರಿಕೆಗಳಿದ್ದು ಸಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳೀಯರು ಮತ್ತು ಅಗ್ನಿಶಾಮಕದಳದ ಕಾರ್ಯಾಚರಣೆಯಿಂದ ಅನಾಹುತ ತಪ್ಪಿದೆ. ಇತ್ತೀಚಿನ ದಿನಗಳಲ್ಲಿ ಬ್ರಹ್ಮಾವರ ಪರಿಸರದಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು ತಾಲೂಕು ಕೇಂದ್ರದಲ್ಲಿ ಶಾಶ್ವತ ಅಗ್ನಿಶಾಮಕ ಠಾಣೆ ಬೇಕೆಂಬ ಬೇಡಿಕೆ ಹೆಚ್ಚಿದೆ. ಯಾವುದೇ ಅವಘಡ ಸಂಭವಿಸಿದರೆ, ಉಡುಪಿ ಇಂದ ಅಗ್ನಿಶಾಮಕ ವಾಹನ ಹೋಗಬೇಕಾಗಿದೆ.ಇದು ಸಾರ್ವಜನಿಕ ರ ಆಕ್ರೋಶ ಕ್ಕೆ ಕಾರಣವಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…