ಬಂಟ್ವಾಳ : ಮಗು ಸಹಿತ ಒಂದೇ ಕುಟುಂಬದ ಮೂವರು ಕಾಣೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ.
ಮೂಲತಃ ನಾವೂರ ಗ್ರಾಮದ ನಿವಾಸಿಗಳಾದ ಸದಾಶಿವ ಮತ್ತು ಅವರ ಪತ್ನಿ ಪ್ರತಿಭಾ ಹಾಗೂ ಇವರ ಮಗ 9 ವರ್ಷದ ರಿತ್ವಿಕ್ ಕಾಣೆಯಾಗಿರುವ ವ್ಯಕ್ತಿಗಳಾಗಿದ್ದಾರೆ. ಡಿ.17 ರಂದು ಮೂವರು ಕಾಣೆಯಾಗಿದ್ದು, ಡಿ.25 ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೂ ಈವರೆಗೆ ಕುಟುಂಬದ ಪತ್ತೆಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸದಾಶಿವ ಮತ್ತು ಪ್ರತಿಭಾ ಅವರಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗುವಿದ್ದು, ಇವರು ನಾಲ್ಕು ಮಂದಿ ಡಿ.16 ರಂದು ನಾವೂರ ಮನೆಯಿಂದ ಇವರು ಪ್ರತಿಭಾ ಅವರ ತಂಗಿಯ ಗಂಡನ ಮನೆಯಾದ ಮೂಡುನಡುಗೋಡು ಗ್ರಾಮದ ಶಾಂತಿಗುರಿಯಲ್ಲಿರುವ ಧರ್ಣಪ್ಪ ಪೂಜಾರಿ ಅವರ ಮನೆಗೆ ಬಂದಿದ್ರು, ಅ ದಿನ ಅಲ್ಲೇ ಉಳಿದುಕೊಂಡಿದ್ದ ಇವರು ಮುಂಜಾನೆ ವೇಳೆಗೆ ಮಗಳನ್ನು ತಂಗಿ ಮನೆಯಲ್ಲಿ ಬಿಟ್ಟು ಸದಾಶಿವ ಮತ್ತು ಪತ್ನಿ ಪ್ರತಿಭಾ ಹಾಗೂ ಮಗ ರಿತ್ವಿಕ್ ಮೂವರು ಕಾಣೆಯಾಗಿದ್ದಾರೆ. ಮಗಳನ್ನು ಬಿಟ್ಟು ಕಾಣೆಯಾದ ಈ ಕುಟುಂಬದ ಬಗ್ಗೆ ಸಾಕಷ್ಟು ಅನುಮಾನಗಳು ಮೂಡತೊಡಗಿದ್ದು, ಇವರ ಪತ್ತೆ ಮಾಡಿಕೊಡುವಂತೆ ಧರ್ಣಪ್ಪ ಪೂಜಾರಿ ಅವರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಂದೆ ತಾಯಿ ಮತ್ತು ತಮ್ಮನನ್ನು ಕಳೆದುಕೊಂಡು ಹೆಣ್ಮಗಳು ಕೊರಗುತ್ತಿರುವ ಬಗ್ಗೆ ಮನೆಯವರು ಚಿಂತಿತರಾಗಿದ್ದಾರೆ. ಕಾಣೆಯಾದ ಮೂವರು ತುಳು ಕನ್ನಡ ಭಾಷೆ ತಿಳಿದಿದ್ದು, ಇವರ ಗುರುತು ಪತ್ತೆಯಾದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಸಂಪರ್ಕ ಮಾಡುವಂತೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಅವರು ಮನವಿ ಮಾಡಿದ್ದಾರೆ.
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…
ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು…