ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಶಬರಿಮಲೆ ದೇವರ ದರ್ಶನ ಮುಗಿಸಿ ಮನೆಗೆ ಬರುವ ವೇಳೆ ಲಾರಿ ಡಿ*ಕ್ಕಿ; ಬಾಲಕ ಸಾವು!

ಶಬರಿಮಲೆ ಯಾತ್ರೆ ಕೈಗೊಂಡ ಬಾಲಕ ದೇವರ ದರ್ಶನ ಮುಗಿಸಿ ವಾಪಸು ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತದಾರಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ನಡೆದಿದೆ.

ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಮೀಶ ಪೂಜಾರಿ ಎಂಬಾತ ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ. ಇನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿಗಳಾದ ಅಶೋಕ್ ಪೂಜಾರಿ, ಸಂತೋಷ್ ಪೂಜಾರಿ, ಸಚಿನ್, ಗೋಪಾಲಪೂಜಾರಿ, ಲಕ್ಮೀಶ ಪೂಜಾರಿ, ಕಿರಣ್, ವರದ್ ರಾಜ್ ಇನ್ನೋವಾ ಕಾರಿನಲ್ಲಿ ಒಟ್ಟು 7 ಮಂದಿ ಕುರಿಯಾಳದಿಂದ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ತೆರಳಿದ್ದಾರೆ.

ಸಿದ್ದಕಟ್ಟೆ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಲಕ್ಷ್ಮೀಶ ಆತನ ತಂದೆ ಅಶೋಕ್ ಪೂಜಾರಿ ಜೊತೆ ಶಬರಿಮಲೆಗೆ ಜ. 7ರಂದು ಇನ್ನೋವಾ ಕಾರಿನಲ್ಲಿ ತೆರಳಿದ್ರು, ಒಟ್ಟು ಒಂಬತ್ತು ಮಂದಿ ಕಾರಿನಲ್ಲಿ ತೆರಳಿದ್ದು, ದೇವರ ದರ್ಶನ ಮುಗಿಸಿ ವಾಪಸು ಜ. 9 ರಂದು ಮನೆಗೆ ಬರುತ್ತಿದ್ದ ವೇಳೆ ಕೊಟೆಕಲ್ ಎಂಬಲ್ಲಿ ಇವರ ಕಾರು ಕೆಟ್ಟುಹೋಗಿದೆ ಎಂಬ ಕಾರಣಕ್ಕಾಗಿ ಅಶೋಕ್ ಪೂಜಾರಿ ಒಬ್ಬರು ಕಾರಿನೊಳಗೆ ಕುಳಿತು ಕೊಂಡು ಉಳಿದಂತೆ ಚಾಲಕ ಸೇರಿ ಏಳು ಮಂದಿ ಕೂಡ ಕಾರಿನ ಎದುರು ಬೊನೆಟ್ ಓಪನ್ ಮಾಡಿ ಕಾರು ರಿಪೇರಿಯಲ್ಲಿ ತೊಡಗಿದ್ರು, ಸುಮಾರು 2 ಗಂಟೆ ವೇಳೆಗೆ ಯಮಸ್ವರೂಪಿ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎಲ್ಲರೂ ರಸ್ತೆಗೆ ಎಸೆಯಲ್ಪಟ್ಟಿದ್ದು ಅದೇ ಯಮ ಸ್ಚರೂಪಿ ಲಾರಿಯ ಅಡಿಗೆ ಬಾಲಕ ಲಕ್ಮೀಶ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉಳಿದಂತೆ ವರದರಾಜ್ ಎಂಬವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಕಾರಿನ ಎದುರಿದ್ದ ಎಲ್ಲರು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!