ಶಬರಿಮಲೆ ಯಾತ್ರೆ ಕೈಗೊಂಡ ಬಾಲಕ ದೇವರ ದರ್ಶನ ಮುಗಿಸಿ ವಾಪಸು ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತದಾರಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ನಡೆದಿದೆ.
ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಮೀಶ ಪೂಜಾರಿ ಎಂಬಾತ ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ. ಇನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿಗಳಾದ ಅಶೋಕ್ ಪೂಜಾರಿ, ಸಂತೋಷ್ ಪೂಜಾರಿ, ಸಚಿನ್, ಗೋಪಾಲಪೂಜಾರಿ, ಲಕ್ಮೀಶ ಪೂಜಾರಿ, ಕಿರಣ್, ವರದ್ ರಾಜ್ ಇನ್ನೋವಾ ಕಾರಿನಲ್ಲಿ ಒಟ್ಟು 7 ಮಂದಿ ಕುರಿಯಾಳದಿಂದ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ತೆರಳಿದ್ದಾರೆ.
ಸಿದ್ದಕಟ್ಟೆ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಲಕ್ಷ್ಮೀಶ ಆತನ ತಂದೆ ಅಶೋಕ್ ಪೂಜಾರಿ ಜೊತೆ ಶಬರಿಮಲೆಗೆ ಜ. 7ರಂದು ಇನ್ನೋವಾ ಕಾರಿನಲ್ಲಿ ತೆರಳಿದ್ರು, ಒಟ್ಟು ಒಂಬತ್ತು ಮಂದಿ ಕಾರಿನಲ್ಲಿ ತೆರಳಿದ್ದು, ದೇವರ ದರ್ಶನ ಮುಗಿಸಿ ವಾಪಸು ಜ. 9 ರಂದು ಮನೆಗೆ ಬರುತ್ತಿದ್ದ ವೇಳೆ ಕೊಟೆಕಲ್ ಎಂಬಲ್ಲಿ ಇವರ ಕಾರು ಕೆಟ್ಟುಹೋಗಿದೆ ಎಂಬ ಕಾರಣಕ್ಕಾಗಿ ಅಶೋಕ್ ಪೂಜಾರಿ ಒಬ್ಬರು ಕಾರಿನೊಳಗೆ ಕುಳಿತು ಕೊಂಡು ಉಳಿದಂತೆ ಚಾಲಕ ಸೇರಿ ಏಳು ಮಂದಿ ಕೂಡ ಕಾರಿನ ಎದುರು ಬೊನೆಟ್ ಓಪನ್ ಮಾಡಿ ಕಾರು ರಿಪೇರಿಯಲ್ಲಿ ತೊಡಗಿದ್ರು, ಸುಮಾರು 2 ಗಂಟೆ ವೇಳೆಗೆ ಯಮಸ್ವರೂಪಿ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎಲ್ಲರೂ ರಸ್ತೆಗೆ ಎಸೆಯಲ್ಪಟ್ಟಿದ್ದು ಅದೇ ಯಮ ಸ್ಚರೂಪಿ ಲಾರಿಯ ಅಡಿಗೆ ಬಾಲಕ ಲಕ್ಮೀಶ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉಳಿದಂತೆ ವರದರಾಜ್ ಎಂಬವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಕಾರಿನ ಎದುರಿದ್ದ ಎಲ್ಲರು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…