ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣಕ್ಕಾಗಿ ಪೀಡಿಸಿ, ಹಲ್ಲೆಗೆ ಯತ್ನ…!

 

ಮಂಗಳೂರು : ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣಕ್ಕಾಗಿ ಪೀಡಿಸಿ, ಹಲ್ಲೆಗೆ ಯತ್ನ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದನಗಳನ್ನು ಕಡಿಯಲು ಕೊಡ್ತೀಯಲ್ವಾ ಎಂದು ಮೂವರು ಆರೋಪಿಗಳು ಹಪ್ತಾ ಕೇಳಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ನಡೆದ ಘಟನೆ ಇದಾಗಿದ್ದು, ಅಂಗಾರಗುಡ್ಡೆ ಕೆಂಚನಕೆರೆ ನಿವಾಸಿ ಶಂಸುದ್ದೀನ್ ಎಂಬವರ ಮನೆಗೆ ನುಗ್ಗಿ ಮೂವರು ಆರೋಪಿಗಳು ಧಮಕಿ ಹಾಕಿದ್ದಾರೆ. ಶ್ಯಾಮಸುಂದರ್ ಶೆಟ್ಟಿ ,ಅಕ್ಷಯ್ ಪೂಜಾರಿ ಮತ್ತು ಸುವೀನ್ ಕಾಂಚನ್ ಬಂಧಿಸಲ್ಪಟ್ಟಿದ್ದಾರೆ. ಮುಂಬಯಿಯಲ್ಲಿ ನೆಲೆಸಿರುವ ಉದ್ಯಮಿಯೊಬ್ಬರಿಗೆ ಸೇರಿದ ಗದ್ದೆ, ತೋಟ, ಜಾಗ ಮತ್ತು ಮನೆಯನ್ನು ಶಂಸುದ್ದೀನ್ ನೋಡಿಕೊಳ್ಳುತ್ತಿದ್ದಾರೆ. ಮುಲ್ಕಿಯ ಅರಸು ಕಂಬಳದಲ್ಲಿ ಶಂಸುದ್ದೀನ್ ತಂದಿದ್ದ ಕೋಣಗಳಿಗೆ ಬಹುಮಾನ ಸಿಕ್ಕಿತ್ತು. ಬಹುಮಾನವಾಗಿ ಸಿಕ್ಕಿ ಬಂಗಾರದ ಸರದ ಜೊತೆಗೆ ಹಣ ಕೊಡಬೇಕೆಂದು ಈ ಮೂವರು ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಪ್ರಕರಣದ ತನಿಖೆ ನಡೆಸಿ ಶ್ಯಾಮಸುಂದರ್ ಶೆಟ್ಟಿ ಮತ್ತು ಅಕ್ಷಯ್ ಪೂಜಾರಿ ಮತ್ತು ಸುವೀನ್ ಕಾಂಚನ್ ಎಂಬವರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!