ಮಂಗಳೂರು : ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣಕ್ಕಾಗಿ ಪೀಡಿಸಿ, ಹಲ್ಲೆಗೆ ಯತ್ನ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದನಗಳನ್ನು ಕಡಿಯಲು ಕೊಡ್ತೀಯಲ್ವಾ ಎಂದು ಮೂವರು ಆರೋಪಿಗಳು ಹಪ್ತಾ ಕೇಳಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ನಡೆದ ಘಟನೆ ಇದಾಗಿದ್ದು, ಅಂಗಾರಗುಡ್ಡೆ ಕೆಂಚನಕೆರೆ ನಿವಾಸಿ ಶಂಸುದ್ದೀನ್ ಎಂಬವರ ಮನೆಗೆ ನುಗ್ಗಿ ಮೂವರು ಆರೋಪಿಗಳು ಧಮಕಿ ಹಾಕಿದ್ದಾರೆ. ಶ್ಯಾಮಸುಂದರ್ ಶೆಟ್ಟಿ ,ಅಕ್ಷಯ್ ಪೂಜಾರಿ ಮತ್ತು ಸುವೀನ್ ಕಾಂಚನ್ ಬಂಧಿಸಲ್ಪಟ್ಟಿದ್ದಾರೆ. ಮುಂಬಯಿಯಲ್ಲಿ ನೆಲೆಸಿರುವ ಉದ್ಯಮಿಯೊಬ್ಬರಿಗೆ ಸೇರಿದ ಗದ್ದೆ, ತೋಟ, ಜಾಗ ಮತ್ತು ಮನೆಯನ್ನು ಶಂಸುದ್ದೀನ್ ನೋಡಿಕೊಳ್ಳುತ್ತಿದ್ದಾರೆ. ಮುಲ್ಕಿಯ ಅರಸು ಕಂಬಳದಲ್ಲಿ ಶಂಸುದ್ದೀನ್ ತಂದಿದ್ದ ಕೋಣಗಳಿಗೆ ಬಹುಮಾನ ಸಿಕ್ಕಿತ್ತು. ಬಹುಮಾನವಾಗಿ ಸಿಕ್ಕಿ ಬಂಗಾರದ ಸರದ ಜೊತೆಗೆ ಹಣ ಕೊಡಬೇಕೆಂದು ಈ ಮೂವರು ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಪ್ರಕರಣದ ತನಿಖೆ ನಡೆಸಿ ಶ್ಯಾಮಸುಂದರ್ ಶೆಟ್ಟಿ ಮತ್ತು ಅಕ್ಷಯ್ ಪೂಜಾರಿ ಮತ್ತು ಸುವೀನ್ ಕಾಂಚನ್ ಎಂಬವರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…