ಮಂಗಳೂರು : ಬಾಂಗ್ಲಾದೇಶಿ ಎಂದು ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರ ವಿರುದ್ದ ಕೇಸು ದಾಖಲು ಮಾಡಲಾಗಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ, ಆರೋಪಿಗಳ ಬಂಧನವಾಗಿದೆ . ಜಾರ್ಖಂಡ್ ಮೂಲದ ದಿಲ್ಜಾನ್ ಅನ್ಸಾರಿ ಕಳೆದ 10-15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತಾ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಹಲ್ಲೆ ಮತ್ತು ಮಾನಸಿಕ ಹಿಂಸೆಗೆ ಒಳಗಾದ ದಿಲ್ಜಾನ್ ಅನ್ಸಾರಿ ದುಷ್ಕರ್ಮಿಗಳ ಭಯದಿಂದ ಪೊಲೀಸರಿಗೆ ದೂರು ನೀಡಲು ಹಿಂಜರಿದಿದ್ದಾರೆ. ಈ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಲಸೆ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…