ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ರೈಲ್ವೆ ನಿಲ್ದಾಣದ ಕಾಮಗಾರಿಯ ಗುಣಮಟ್ಟದ ಕುರಿತು ಸಾರ್ವಜನಿಕರಿಂದ ಅನುಮಾನ ವ್ಯಕ್ತ….!

ಅಮೃತ ಭಾರತ ಯೋಜನೆಯಡಿ ನವೀಕರಣಗೊಳ್ಳುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕಾಮಗಾರಿಯ ಗುಣಮಟ್ಟದ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದರು.

ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಇದರಲ್ಲಿ ಬಂಟ್ವಾಳ ರೈಲ್ವೆ ನಿಲ್ದಾಣದ ಕಂಪೌಂಡ್‌ನ ಕಲ್ಲುಗಳು ಕುಸಿದಿರುವುದು ಕಂಡುಬಂದಿದೆ. ಇದನ್ನು ಯಾರಾದರೂ ಉದ್ದೇಶ ಪೂರ್ವಕವಾಗಿ ಕೆಡವಿದರೋ ಅಥವಾ ಕಳಪೆ ಕಾಮಗಾರಿಯಿಂದಾಗಿ ಹೀಗಾಯಿತೋ ಎಂಬ ಅನುಮಾನ ಮೂಡುವಂತೆ ಈ ವಿಡಿಯೋದಲ್ಲಿರುವ ದೃಶ್ಯಗಳು ಕಂಡುಬರುತ್ತಿವೆ.

ಕೋಟಿಗಟ್ಟಲೆ ಖರ್ಚು ಮಾಡಿ ಮರು ನಿರ್ಮಾಣವಾಗುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕೆಲಸ ಕಾರ್ಯಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಮಾಡಿದ್ದು, ಅಂದಿನ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಹಾಜರಿದ್ದಾರೆ. ಇದೀಗ ಈ ಭಾಗದ ರೈಲ್ವೆ ಸುರಕ್ಷಾ ಸಮಿತಿ, ಸಲಹಾ ಸಮಿತಿಯ ಸದಸ್ಯರು ಹಾಗೂ ಸಂಬಂಧಪಟ್ಟ ಶಾಸಕರು, ಸಂಸದರು ಕಾಮಗಾರಿ ವೀಕ್ಷಿಸಿ ಇದರ ಗುಣಮಟ್ಟವನ್ನು ಸಂಬಂಧಪಟ್ಟವರಿಂದ ಪರಿಶೀಲಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಒಂದು ವೇಳೆ ಕಿಡಿಗೇಡಿಗಳೇನಾದರೂ ಇಂಥ ಕೃತ್ಯವೆಸಗಿದರೆ, ಅವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!