ಅಮೃತ ಭಾರತ ಯೋಜನೆಯಡಿ ನವೀಕರಣಗೊಳ್ಳುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕಾಮಗಾರಿಯ ಗುಣಮಟ್ಟದ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದರು.
ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಇದರಲ್ಲಿ ಬಂಟ್ವಾಳ ರೈಲ್ವೆ ನಿಲ್ದಾಣದ ಕಂಪೌಂಡ್ನ ಕಲ್ಲುಗಳು ಕುಸಿದಿರುವುದು ಕಂಡುಬಂದಿದೆ. ಇದನ್ನು ಯಾರಾದರೂ ಉದ್ದೇಶ ಪೂರ್ವಕವಾಗಿ ಕೆಡವಿದರೋ ಅಥವಾ ಕಳಪೆ ಕಾಮಗಾರಿಯಿಂದಾಗಿ ಹೀಗಾಯಿತೋ ಎಂಬ ಅನುಮಾನ ಮೂಡುವಂತೆ ಈ ವಿಡಿಯೋದಲ್ಲಿರುವ ದೃಶ್ಯಗಳು ಕಂಡುಬರುತ್ತಿವೆ.
ಕೋಟಿಗಟ್ಟಲೆ ಖರ್ಚು ಮಾಡಿ ಮರು ನಿರ್ಮಾಣವಾಗುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕೆಲಸ ಕಾರ್ಯಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಮಾಡಿದ್ದು, ಅಂದಿನ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಹಾಜರಿದ್ದಾರೆ. ಇದೀಗ ಈ ಭಾಗದ ರೈಲ್ವೆ ಸುರಕ್ಷಾ ಸಮಿತಿ, ಸಲಹಾ ಸಮಿತಿಯ ಸದಸ್ಯರು ಹಾಗೂ ಸಂಬಂಧಪಟ್ಟ ಶಾಸಕರು, ಸಂಸದರು ಕಾಮಗಾರಿ ವೀಕ್ಷಿಸಿ ಇದರ ಗುಣಮಟ್ಟವನ್ನು ಸಂಬಂಧಪಟ್ಟವರಿಂದ ಪರಿಶೀಲಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಒಂದು ವೇಳೆ ಕಿಡಿಗೇಡಿಗಳೇನಾದರೂ ಇಂಥ ಕೃತ್ಯವೆಸಗಿದರೆ, ಅವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…