ಅಮೃತ ಭಾರತ ಯೋಜನೆಯಡಿ ನವೀಕರಣಗೊಳ್ಳುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕಾಮಗಾರಿಯ ಗುಣಮಟ್ಟದ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದರು.
ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಇದರಲ್ಲಿ ಬಂಟ್ವಾಳ ರೈಲ್ವೆ ನಿಲ್ದಾಣದ ಕಂಪೌಂಡ್ನ ಕಲ್ಲುಗಳು ಕುಸಿದಿರುವುದು ಕಂಡುಬಂದಿದೆ. ಇದನ್ನು ಯಾರಾದರೂ ಉದ್ದೇಶ ಪೂರ್ವಕವಾಗಿ ಕೆಡವಿದರೋ ಅಥವಾ ಕಳಪೆ ಕಾಮಗಾರಿಯಿಂದಾಗಿ ಹೀಗಾಯಿತೋ ಎಂಬ ಅನುಮಾನ ಮೂಡುವಂತೆ ಈ ವಿಡಿಯೋದಲ್ಲಿರುವ ದೃಶ್ಯಗಳು ಕಂಡುಬರುತ್ತಿವೆ.
ಕೋಟಿಗಟ್ಟಲೆ ಖರ್ಚು ಮಾಡಿ ಮರು ನಿರ್ಮಾಣವಾಗುತ್ತಿರುವ ಬಂಟ್ವಾಳ ರೈಲ್ವೆ ನಿಲ್ದಾಣದ ಕೆಲಸ ಕಾರ್ಯಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಮಾಡಿದ್ದು, ಅಂದಿನ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಹಾಜರಿದ್ದಾರೆ. ಇದೀಗ ಈ ಭಾಗದ ರೈಲ್ವೆ ಸುರಕ್ಷಾ ಸಮಿತಿ, ಸಲಹಾ ಸಮಿತಿಯ ಸದಸ್ಯರು ಹಾಗೂ ಸಂಬಂಧಪಟ್ಟ ಶಾಸಕರು, ಸಂಸದರು ಕಾಮಗಾರಿ ವೀಕ್ಷಿಸಿ ಇದರ ಗುಣಮಟ್ಟವನ್ನು ಸಂಬಂಧಪಟ್ಟವರಿಂದ ಪರಿಶೀಲಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಒಂದು ವೇಳೆ ಕಿಡಿಗೇಡಿಗಳೇನಾದರೂ ಇಂಥ ಕೃತ್ಯವೆಸಗಿದರೆ, ಅವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…