ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ನ ತಜ್ಞ ವೈದ್ಯರು 9 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಒಂದು ವರ್ಷದ ಸಯಾಮಿ ಶಿಶುಗಳನ್ನು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ.
ಉತ್ತರ ಪ್ರದೇಶದ ಬರೇಲಿ ಮೂಲದ ದೀಪಿಕಾ ಮತ್ತು ಅಂಕುರ್ ಗುಪ್ತಾ ಅವರಿಗೆ ರಿದ್ಧಿ ಮತ್ತು ಸಿದ್ಧಿ ಎಂಬ ಅವಳಿ ಹೆಣ್ಣು ಮಕ್ಕಳಿದ್ದರು. ಈ ಮಕ್ಕಳ ಎದೆ ಮತ್ತು ಹೊಟ್ಟೆ ಭಾಗಗಳು ಸೇರಿಕೊಂಡಿದ್ದವು.
ರಿದ್ಧಿ ಮತ್ತು ಸಿದ್ಧಿ ಸುಮಾರು 1 ವರ್ಷದ ಅವಳಿ ಸಹೋದರಿಯರು. ಹುಟ್ಟಿನಿಂದಲೇ ಪರಸ್ಪರ ಅಂಟಿಕೊಂಡಿದ್ದರು. ದೇಹದ ಅನೇಕ ಭಾಗಗಳು ಒಂದಕ್ಕೊಂದು ಸಂಪರ್ಕ ಹೊಂದಿದ್ದವು.
ಬರೇಲಿಯಲ್ಲಿ ದೀಪಿಕಾ ಗುಪ್ತಾ ಅವರ ಗರ್ಭಧಾರಣೆಯ ನಾಲ್ಕನೇ ತಿಂಗಳಲ್ಲಿ ಥೋರಾಕೊ-ಆಂಫಾಲೋಪಾಗಸ್ ಸಂಯೋಜಿತ ಅವಳಿಗಳೆಂದು ಜನನದ ಮೊದಲೇ ಗುರುತಿಸಲಾಗಿತ್ತು. ಕಳೆದ ವರ್ಷ ಜುಲೈ 7ರಂದು ಜನಿಸಿದ ಮಕ್ಕಳು ಐದು ತಿಂಗಳ ಕಾಲ ಐಸಿಯುನಲ್ಲಿದ್ದರು. ಸುದೀರ್ಘ ಶಸ್ತ್ರಚಿಕಿತ್ಸೆಯ ನಂತರ ಜೂನ್ 8ರಂದು ಮಕ್ಕಳನ್ನು ಬೇರ್ಪಡಿಸಲಾಯಿತು. ಅವಳಿಗಳು ತಮ್ಮ ಮೊದಲ ಹುಟ್ಟುಹಬ್ಬವನ್ನು ಆಸ್ಪತ್ರೆಯಲ್ಲೇ ಆಚರಿಸಿಕೊಂಡರು” ಎಂದು ಪೀಡಿಯಾಟ್ರಿಕ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಮಿನು ಬಾಜ್ಪೈ ಹೇಳಿದ್ದಾರೆ.
ಏಮ್ಸ್ ಆಸ್ಪತ್ರೆಯು ಕಳೆದ ಕೆಲವು ವರ್ಷಗಳಲ್ಲಿ ಇಂತಹ ಹಲವು ಆಪರೇಷನ್ಗಳನ್ನು ಮಾಡಿದೆ. ಇಬ್ಬರು ಸಹೋದರಿಯರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಭವಿಷ್ಯದಲ್ಲಿ ಈ ಶಸ್ತ್ರಚಿಕಿತ್ಸೆಯಿಂದ ಅವರು ಯಾವುದೇ ಸಮಸ್ಯೆ ಎದುರಿಸುವುದಿಲ್ಲ. ಹೀಗೆ ಅವಳಿ ಮಕ್ಕಳು ಜನಿಸುವುದು ಸಾವಿರದಲ್ಲಿ ಒಬ್ಬರಿಗೆ ಮಾತ್ರ. ಚಿಕಿತ್ಸೆಯ ನಂತರ ಪೋಷಕರು ತುಂಬಾ ಸಂತೋಷವಾಗಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.
ದೇಶದ ಅತಿದೊಡ್ಡ ಆಸ್ಪತ್ರೆಯಾದ ಏಮ್ಸ್ ವೈದ್ಯರು ಆಧುನಿಕ ವೈದ್ಯಕೀಯ ವಿಜ್ಞಾನದಲ್ಲಿ ಏಮ್ಸ್ ಹೆಸರೇಕೆ ಉತ್ತುಂಗದಲ್ಲಿದೆ ಎಂದು ಈ ಅಪರೂಪದ ಶಸ್ತ್ರಚಿಕಿತ್ಸೆಯ ಮೂಲಕ ಸಾಬೀತುಪಡಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…