ಶ್ರೀ ಶಾರದಾ ಭಜನಾ ಮಂದಿರ ನಗ್ರಿ ಇಲ್ಲಿಂದ ಶ್ರೀ ಮಿತ್ತಮಜಲು ಕ್ಷೇತ್ರದ ರಸ್ತೆಗೆ ಸಂಪರ್ಕ ಕಲ್ಪಿಸುವ ಸುಮಾರು 1.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೊಸ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸ್ಥಳೀಯರೊಂದಿಗೆ ವೀಕ್ಷಣೆ ನಡೆಸಿದ ಬಳಿಕ ಸಾರ್ವಜನಿಕರಿಗೆ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ರಸ್ತೆ ಸಂಪರ್ಕವೂ ಒಂದಾಗಿದ್ದು, ಗ್ರಾಮದ ಮೂಲೆಮೂಲೆಗಳಿಗೆ ಸುಸಜ್ಜಿತವಾದ ರಸ್ತೆಯ ನಿರ್ಮಾಣ ಮಾಡಿ ಸಂಪರ್ಕ ಕಲ್ಪಿಸಿದರೆ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಪುದ್ದಾರ್ ಮೆಚ್ಚಿ ಜಾತ್ರೆಯು ದಿನಾಂಕ 14, ಬುಧವಾರ ರಾತ್ರಿ ಉಳ್ಳಾಲ್ತಿ ಮೆಚ್ಚಿಯೊಂದಿಗೆ ಪ್ರಾರಂಭವಾಗಿ ದಿನಾಂಕ 15, ಗುರುವಾರ ಬೆಳಗ್ಗೆ 10.30 ಕ್ಕೆ ದೈಯ್ಯಂಗುಲು ನೇಮೋತ್ಸವ ಹಾಗೂ ರಾತ್ರಿ ನಾಲ್ಕೆತ್ತಾಯ ದೈವದ ಮೆಚ್ಚಿಮೂಲಕ ನಡೆಯಲಿದೆ. ಹಾಗಾಗಿ ಭಕ್ತರಿಗೆ ಬರಲು ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆಯನ್ನು ಸಾರ್ವಜನಿಕರ ಸಂಚಾರಕ್ಕೆ ಬಿಟ್ಟು ಕೊಡಲಾಗಿದೆ ಎಂದು ನಗ್ರಿಗುತ್ತು ವಿವೇಕ್ ಶೆಟ್ಟಿ ತಿಳಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಶ್ರೀಕಾಂತ್ ಶೆಟ್ಟಿ ಸಜೀಪ, ಸಜೀಪ ಮೂಡ ಗ್ರಾ.ಪಂ.ಮಾಜಿ ಅಧ್ಯಕ್ಷ ಶೋಬಿತ್ ಪೂಂಜ, ಜಿ.ಪಂ.ಮಾಜಿ ಸದಸ್ಯ ರವೀಂದ್ರ ಕಂಬಳಿ, ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…