ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ರಣಹದ್ದಿನಲ್ಲಿ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತು, ಜೊತೆಗೆ ಅದರ ಕಾಲಿನಲ್ಲಿ ಗುರುತಿನ ಸಂಖ್ಯೆಯ ಟ್ಯಾಗ್ ಇರುವುದು ಕಂಡುಬಂದಿದೆ.
ಅಸಹಜ ಸ್ಥಿತಿಯಲ್ಲಿದ್ದ ರಣಹದ್ದು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. ನಂತರ ಠಾಣೆಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರದ ನಾಗಪೂರ ಬಳಿಯ ಮೇಲಘಾಣ ಪ್ರದೇಶದಿಂದ ರಣಹದ್ದು ಬಂದಿದೆ ಎನ್ನಲಾಗಿದೆ. ಜಿಪಿಎಸ್, ಟ್ರ್ಯಾಕರ್ ಭಾರವಾದ ಕಾರಣ ಪಕ್ಷಿ ಕೆಳಗೆ ಬಿದ್ದಿದೆ. ಮಹಾರಾಷ್ಟ್ರದ ಅರಣ್ಯ ಇಲಾಖೆಯಿಂದ ರಣಹದ್ದಿಗೆ ಜಿಪಿಎಸ್ ಹಾಗೂ ಟ್ರ್ಯಾಕರ್ ಅಳವಡಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು ರಣಹದ್ದು ಸಂಖ್ಯೆ ಕಡಿಮೆಯಾಗಿರೋ ಕಾರಣ ಅಧ್ಯಯನಕ್ಕಾಗಿ ಅರಣ್ಯಾಧಿಕಾರಿಗಳು ಈ ಯೋಜನೆ ಮಾಡಿದ್ದಾರೆ ಎನ್ನಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…