ಮುನ್ನೂರು ಗ್ರಾಮದ, ರಾಣಿಪುರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳದ ನಂದಾವರ ಸಜಿಪ ಮುನ್ನೂರು ನಿವಾಸಿ 40 ವರ್ಷದ ಇಮ್ಮಿಯಾಜ್ ಯಾನೆ ಮೊಹಮ್ಮದ್ ಇಮ್ಮಿಯಾಜ್ ಬಂಧಿತ ಆರೋಪಿ. ಈತ ರಾಣಿಪುರ ಮೈದಾನದ ಬಳಿ ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಎಮ್.ಡಿ.ಎಮ್.ಎ ಮಾರಾಟ ಮಾಡತ್ತಿದ್ದ ಖಚಿತ ಮಾಹಿತಿ ಹಿನ್ನೆಲೆ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಆತನಿಂದ 65,000 ರೂಪಾಯಿ ಮೌಲ್ಯದ 13 ಗ್ರಾಂ ತೂಕದ ಎಮ್.ಡಿ.ಎಮ್.ಎ, 2 ಸಾವಿರ ರೂಪಾಯಿ ನಗದು, ಒಂದು ಮೊಬೈಲ್ ಫೋನ್, ತೂಕ ಮಾಪನ ಮತ್ತು ಇತರ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.



