ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಚಿನ್ನ ಕಸಿಯಲು ಬಂದು ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಂದ ಆರೋಪಿಯ ಬಂಧನ!

ಕುಂಬಡಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪುಷ್ಪಲತಾ ವಿ ಶೆಟ್ಟಿ ಕೊ*ಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಬದಿಯಡ್ಕ ಪಂಚಾಯತ್ ನ ಪೆರ್ಡಾಲ ಮೂಲದ 47 ವರ್ಷದ ಪರಮೇಶ್ವರ ಅಲಿಯಾಸ್ ರಮೇಶ್ ನಾಯಕ್ ಬಂಧಿತ ಆರೋಪಿ. ಮೊವ್ವಾರ್ ಗ್ರಾಮದ ಅಜಿಲದಲ್ಲಿರುವ ತಮ್ಮ ಮನೆಯಲ್ಲಿ ಪುಷ್ಪಲತಾ ಶೆಟ್ಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಜ.14 ರಂದು ಬೆಳಿಗ್ಗೆ ಪುಷ್ಪಲತಾ ಶ*ವವಾಗಿ ಪತ್ತೆಯಾಗಿದ್ದು, ಮ*ರಣೋತ್ತರ ಪರೀಕ್ಷೆಯಲ್ಲಿ, ಕೈಯಿಂದ ಉಸಿರುಗಟ್ಟಿಸಿ ಆಕೆಯನ್ನು ಕೊ*ಲ್ಲಲಾಗಿದೆ ಎಂಬುದು ತಿಳಿದುಬಂದಿತ್ತು. ತನಿಖೆ ಆರಂಭಿಸಿದ ಪೊಲೀಸರು, ಆ ಪರಿಸರದಲ್ಲಿ ಹಾದುಹೋದ ಜನರನ್ನು ವಿಚಾರಣೆ ನಡೆಸಿದ್ದಾರೆ. ಆರೋಪಿ ರಮೇಶ್ ನಾಯಕ್ ಆ ಪ್ರದೇಶದಲ್ಲಿ ಹುಲ್ಲು ಕಟ್ಟಿಂಗ್ ಮಾಡುತ್ತಿದ್ದದ್ದನ್ನು ಹಲವರು ನೋಡಿದ್ದರು. ಈ ಆಧಾರದಲ್ಲಿ ರಮೇಶ್ ನಾಯಕ್ ನನ್ನು ವಿಚಾರಣೆಗೊಳಪಡಿಸಲಾಗಿದೆ. ಇನ್ನು ಆತನ ಮೈಮೇಲೆ ಹಲವು ಕಡೆಗಳಲ್ಲಿ ಗಾ*ಯಗಳಿರುವ ಬಗ್ಗೆ ಕೇಳಿದಾಗ ಅದು ಕಾಳುಮೆಣಸು ಕೀಳುವ ವೇಳೆ ಆಗಿದ್ದು ಎಂದು ಸುಳ್ಳು ಹೇಳಿದ್ದ. ವಿಚಾರಣೆ ತೀವ್ರಗೊಳಿಸಿದಾಗ ಕೊ*ಲೆ ಮಾಡಿರುವ ವಿಚಾರ ರಮೇಶ್ ಬಾಯ್ಬಿಟ್ಟಿದ್ದಾನೆ. ರಮೇಶ್ ನಾಯಕ್ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮನೆ ಕಟ್ಟಲು ಭೂಮಿ ಖರೀದಿಸಲು ಸುಮಾರು 8 ಲಕ್ಷ ಸಾಲ ಮಾಡಿದ್ದ. ಈ ಹಿನ್ನಲೆ ಹಣಕ್ಕಾಗಿ ಪುಷ್ಪಲತಾ ಧರಿಸಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಆಕೆ ವಿರೋಧಿಸಿದಾಗ, ಆಕೆಯ ಕತ್ತು ಹಿಸುಕಿ ಕೊಂ*ದಿದ್ದಾನೆ. ಬಳಿಕ ಸುಮಾರು 28 ಗ್ರಾಂನ ಕರಿಮಣಿ ಸರ ಕದ್ದಿದ್ದ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!