ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಚಿನ್ನ ಕಸಿಯಲು ಬಂದು ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಂದ ಆರೋಪಿಯ ಬಂಧನ!

ಕುಂಬಡಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪುಷ್ಪಲತಾ ವಿ ಶೆಟ್ಟಿ ಕೊ*ಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಬದಿಯಡ್ಕ ಪಂಚಾಯತ್ ನ ಪೆರ್ಡಾಲ ಮೂಲದ 47 ವರ್ಷದ ಪರಮೇಶ್ವರ ಅಲಿಯಾಸ್ ರಮೇಶ್ ನಾಯಕ್ ಬಂಧಿತ ಆರೋಪಿ. ಮೊವ್ವಾರ್ ಗ್ರಾಮದ ಅಜಿಲದಲ್ಲಿರುವ ತಮ್ಮ ಮನೆಯಲ್ಲಿ ಪುಷ್ಪಲತಾ ಶೆಟ್ಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಜ.14 ರಂದು ಬೆಳಿಗ್ಗೆ ಪುಷ್ಪಲತಾ ಶ*ವವಾಗಿ ಪತ್ತೆಯಾಗಿದ್ದು, ಮ*ರಣೋತ್ತರ ಪರೀಕ್ಷೆಯಲ್ಲಿ, ಕೈಯಿಂದ ಉಸಿರುಗಟ್ಟಿಸಿ ಆಕೆಯನ್ನು ಕೊ*ಲ್ಲಲಾಗಿದೆ ಎಂಬುದು ತಿಳಿದುಬಂದಿತ್ತು. ತನಿಖೆ ಆರಂಭಿಸಿದ ಪೊಲೀಸರು, ಆ ಪರಿಸರದಲ್ಲಿ ಹಾದುಹೋದ ಜನರನ್ನು ವಿಚಾರಣೆ ನಡೆಸಿದ್ದಾರೆ. ಆರೋಪಿ ರಮೇಶ್ ನಾಯಕ್ ಆ ಪ್ರದೇಶದಲ್ಲಿ ಹುಲ್ಲು ಕಟ್ಟಿಂಗ್ ಮಾಡುತ್ತಿದ್ದದ್ದನ್ನು ಹಲವರು ನೋಡಿದ್ದರು. ಈ ಆಧಾರದಲ್ಲಿ ರಮೇಶ್ ನಾಯಕ್ ನನ್ನು ವಿಚಾರಣೆಗೊಳಪಡಿಸಲಾಗಿದೆ. ಇನ್ನು ಆತನ ಮೈಮೇಲೆ ಹಲವು ಕಡೆಗಳಲ್ಲಿ ಗಾ*ಯಗಳಿರುವ ಬಗ್ಗೆ ಕೇಳಿದಾಗ ಅದು ಕಾಳುಮೆಣಸು ಕೀಳುವ ವೇಳೆ ಆಗಿದ್ದು ಎಂದು ಸುಳ್ಳು ಹೇಳಿದ್ದ. ವಿಚಾರಣೆ ತೀವ್ರಗೊಳಿಸಿದಾಗ ಕೊ*ಲೆ ಮಾಡಿರುವ ವಿಚಾರ ರಮೇಶ್ ಬಾಯ್ಬಿಟ್ಟಿದ್ದಾನೆ. ರಮೇಶ್ ನಾಯಕ್ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮನೆ ಕಟ್ಟಲು ಭೂಮಿ ಖರೀದಿಸಲು ಸುಮಾರು 8 ಲಕ್ಷ ಸಾಲ ಮಾಡಿದ್ದ. ಈ ಹಿನ್ನಲೆ ಹಣಕ್ಕಾಗಿ ಪುಷ್ಪಲತಾ ಧರಿಸಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಆಕೆ ವಿರೋಧಿಸಿದಾಗ, ಆಕೆಯ ಕತ್ತು ಹಿಸುಕಿ ಕೊಂ*ದಿದ್ದಾನೆ. ಬಳಿಕ ಸುಮಾರು 28 ಗ್ರಾಂನ ಕರಿಮಣಿ ಸರ ಕದ್ದಿದ್ದ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!