ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಚಿನ್ನ ಕಸಿಯಲು ಬಂದು ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಂದ ಆರೋಪಿಯ ಬಂಧನ!

ಕುಂಬಡಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪುಷ್ಪಲತಾ ವಿ ಶೆಟ್ಟಿ ಕೊ*ಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಬದಿಯಡ್ಕ ಪಂಚಾಯತ್ ನ ಪೆರ್ಡಾಲ ಮೂಲದ 47 ವರ್ಷದ ಪರಮೇಶ್ವರ ಅಲಿಯಾಸ್ ರಮೇಶ್ ನಾಯಕ್ ಬಂಧಿತ ಆರೋಪಿ. ಮೊವ್ವಾರ್ ಗ್ರಾಮದ ಅಜಿಲದಲ್ಲಿರುವ ತಮ್ಮ ಮನೆಯಲ್ಲಿ ಪುಷ್ಪಲತಾ ಶೆಟ್ಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಜ.14 ರಂದು ಬೆಳಿಗ್ಗೆ ಪುಷ್ಪಲತಾ ಶ*ವವಾಗಿ ಪತ್ತೆಯಾಗಿದ್ದು, ಮ*ರಣೋತ್ತರ ಪರೀಕ್ಷೆಯಲ್ಲಿ, ಕೈಯಿಂದ ಉಸಿರುಗಟ್ಟಿಸಿ ಆಕೆಯನ್ನು ಕೊ*ಲ್ಲಲಾಗಿದೆ ಎಂಬುದು ತಿಳಿದುಬಂದಿತ್ತು. ತನಿಖೆ ಆರಂಭಿಸಿದ ಪೊಲೀಸರು, ಆ ಪರಿಸರದಲ್ಲಿ ಹಾದುಹೋದ ಜನರನ್ನು ವಿಚಾರಣೆ ನಡೆಸಿದ್ದಾರೆ. ಆರೋಪಿ ರಮೇಶ್ ನಾಯಕ್ ಆ ಪ್ರದೇಶದಲ್ಲಿ ಹುಲ್ಲು ಕಟ್ಟಿಂಗ್ ಮಾಡುತ್ತಿದ್ದದ್ದನ್ನು ಹಲವರು ನೋಡಿದ್ದರು. ಈ ಆಧಾರದಲ್ಲಿ ರಮೇಶ್ ನಾಯಕ್ ನನ್ನು ವಿಚಾರಣೆಗೊಳಪಡಿಸಲಾಗಿದೆ. ಇನ್ನು ಆತನ ಮೈಮೇಲೆ ಹಲವು ಕಡೆಗಳಲ್ಲಿ ಗಾ*ಯಗಳಿರುವ ಬಗ್ಗೆ ಕೇಳಿದಾಗ ಅದು ಕಾಳುಮೆಣಸು ಕೀಳುವ ವೇಳೆ ಆಗಿದ್ದು ಎಂದು ಸುಳ್ಳು ಹೇಳಿದ್ದ. ವಿಚಾರಣೆ ತೀವ್ರಗೊಳಿಸಿದಾಗ ಕೊ*ಲೆ ಮಾಡಿರುವ ವಿಚಾರ ರಮೇಶ್ ಬಾಯ್ಬಿಟ್ಟಿದ್ದಾನೆ. ರಮೇಶ್ ನಾಯಕ್ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮನೆ ಕಟ್ಟಲು ಭೂಮಿ ಖರೀದಿಸಲು ಸುಮಾರು 8 ಲಕ್ಷ ಸಾಲ ಮಾಡಿದ್ದ. ಈ ಹಿನ್ನಲೆ ಹಣಕ್ಕಾಗಿ ಪುಷ್ಪಲತಾ ಧರಿಸಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಆಕೆ ವಿರೋಧಿಸಿದಾಗ, ಆಕೆಯ ಕತ್ತು ಹಿಸುಕಿ ಕೊಂ*ದಿದ್ದಾನೆ. ಬಳಿಕ ಸುಮಾರು 28 ಗ್ರಾಂನ ಕರಿಮಣಿ ಸರ ಕದ್ದಿದ್ದ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!