ಕ್ರೈಮ್

ಕಾಸರಗೋಡು: ಚಿನ್ನ ಕಸಿಯಲು ಬಂದು ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಂದ ಆರೋಪಿಯ ಬಂಧನ!

ಕುಂಬಡಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪುಷ್ಪಲತಾ ವಿ ಶೆಟ್ಟಿ ಕೊ*ಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಬದಿಯಡ್ಕ ಪಂಚಾಯತ್ ನ ಪೆರ್ಡಾಲ ಮೂಲದ 47 ವರ್ಷದ ಪರಮೇಶ್ವರ ಅಲಿಯಾಸ್ ರಮೇಶ್ ನಾಯಕ್ ಬಂಧಿತ ಆರೋಪಿ. ಮೊವ್ವಾರ್ ಗ್ರಾಮದ ಅಜಿಲದಲ್ಲಿರುವ ತಮ್ಮ ಮನೆಯಲ್ಲಿ ಪುಷ್ಪಲತಾ ಶೆಟ್ಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಜ.14 ರಂದು ಬೆಳಿಗ್ಗೆ ಪುಷ್ಪಲತಾ ಶ*ವವಾಗಿ ಪತ್ತೆಯಾಗಿದ್ದು, ಮ*ರಣೋತ್ತರ ಪರೀಕ್ಷೆಯಲ್ಲಿ, ಕೈಯಿಂದ ಉಸಿರುಗಟ್ಟಿಸಿ ಆಕೆಯನ್ನು ಕೊ*ಲ್ಲಲಾಗಿದೆ ಎಂಬುದು ತಿಳಿದುಬಂದಿತ್ತು. ತನಿಖೆ ಆರಂಭಿಸಿದ ಪೊಲೀಸರು, ಆ ಪರಿಸರದಲ್ಲಿ ಹಾದುಹೋದ ಜನರನ್ನು ವಿಚಾರಣೆ ನಡೆಸಿದ್ದಾರೆ. ಆರೋಪಿ ರಮೇಶ್ ನಾಯಕ್ ಆ ಪ್ರದೇಶದಲ್ಲಿ ಹುಲ್ಲು ಕಟ್ಟಿಂಗ್ ಮಾಡುತ್ತಿದ್ದದ್ದನ್ನು ಹಲವರು ನೋಡಿದ್ದರು. ಈ ಆಧಾರದಲ್ಲಿ ರಮೇಶ್ ನಾಯಕ್ ನನ್ನು ವಿಚಾರಣೆಗೊಳಪಡಿಸಲಾಗಿದೆ. ಇನ್ನು ಆತನ ಮೈಮೇಲೆ ಹಲವು ಕಡೆಗಳಲ್ಲಿ ಗಾ*ಯಗಳಿರುವ ಬಗ್ಗೆ ಕೇಳಿದಾಗ ಅದು ಕಾಳುಮೆಣಸು ಕೀಳುವ ವೇಳೆ ಆಗಿದ್ದು ಎಂದು ಸುಳ್ಳು ಹೇಳಿದ್ದ. ವಿಚಾರಣೆ ತೀವ್ರಗೊಳಿಸಿದಾಗ ಕೊ*ಲೆ ಮಾಡಿರುವ ವಿಚಾರ ರಮೇಶ್ ಬಾಯ್ಬಿಟ್ಟಿದ್ದಾನೆ. ರಮೇಶ್ ನಾಯಕ್ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮನೆ ಕಟ್ಟಲು ಭೂಮಿ ಖರೀದಿಸಲು ಸುಮಾರು 8 ಲಕ್ಷ ಸಾಲ ಮಾಡಿದ್ದ. ಈ ಹಿನ್ನಲೆ ಹಣಕ್ಕಾಗಿ ಪುಷ್ಪಲತಾ ಧರಿಸಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಆಕೆ ವಿರೋಧಿಸಿದಾಗ, ಆಕೆಯ ಕತ್ತು ಹಿಸುಕಿ ಕೊಂ*ದಿದ್ದಾನೆ. ಬಳಿಕ ಸುಮಾರು 28 ಗ್ರಾಂನ ಕರಿಮಣಿ ಸರ ಕದ್ದಿದ್ದ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

4 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

4 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

4 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

4 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

4 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

4 days ago