ಕುಂಬಡಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪುಷ್ಪಲತಾ ವಿ ಶೆಟ್ಟಿ ಕೊ*ಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬದಿಯಡ್ಕ ಪಂಚಾಯತ್ ನ ಪೆರ್ಡಾಲ ಮೂಲದ 47 ವರ್ಷದ ಪರಮೇಶ್ವರ ಅಲಿಯಾಸ್ ರಮೇಶ್ ನಾಯಕ್ ಬಂಧಿತ ಆರೋಪಿ. ಮೊವ್ವಾರ್ ಗ್ರಾಮದ ಅಜಿಲದಲ್ಲಿರುವ ತಮ್ಮ ಮನೆಯಲ್ಲಿ ಪುಷ್ಪಲತಾ ಶೆಟ್ಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಜ.14 ರಂದು ಬೆಳಿಗ್ಗೆ ಪುಷ್ಪಲತಾ ಶ*ವವಾಗಿ ಪತ್ತೆಯಾಗಿದ್ದು, ಮ*ರಣೋತ್ತರ ಪರೀಕ್ಷೆಯಲ್ಲಿ, ಕೈಯಿಂದ ಉಸಿರುಗಟ್ಟಿಸಿ ಆಕೆಯನ್ನು ಕೊ*ಲ್ಲಲಾಗಿದೆ ಎಂಬುದು ತಿಳಿದುಬಂದಿತ್ತು. ತನಿಖೆ ಆರಂಭಿಸಿದ ಪೊಲೀಸರು, ಆ ಪರಿಸರದಲ್ಲಿ ಹಾದುಹೋದ ಜನರನ್ನು ವಿಚಾರಣೆ ನಡೆಸಿದ್ದಾರೆ. ಆರೋಪಿ ರಮೇಶ್ ನಾಯಕ್ ಆ ಪ್ರದೇಶದಲ್ಲಿ ಹುಲ್ಲು ಕಟ್ಟಿಂಗ್ ಮಾಡುತ್ತಿದ್ದದ್ದನ್ನು ಹಲವರು ನೋಡಿದ್ದರು. ಈ ಆಧಾರದಲ್ಲಿ ರಮೇಶ್ ನಾಯಕ್ ನನ್ನು ವಿಚಾರಣೆಗೊಳಪಡಿಸಲಾಗಿದೆ. ಇನ್ನು ಆತನ ಮೈಮೇಲೆ ಹಲವು ಕಡೆಗಳಲ್ಲಿ ಗಾ*ಯಗಳಿರುವ ಬಗ್ಗೆ ಕೇಳಿದಾಗ ಅದು ಕಾಳುಮೆಣಸು ಕೀಳುವ ವೇಳೆ ಆಗಿದ್ದು ಎಂದು ಸುಳ್ಳು ಹೇಳಿದ್ದ. ವಿಚಾರಣೆ ತೀವ್ರಗೊಳಿಸಿದಾಗ ಕೊ*ಲೆ ಮಾಡಿರುವ ವಿಚಾರ ರಮೇಶ್ ಬಾಯ್ಬಿಟ್ಟಿದ್ದಾನೆ. ರಮೇಶ್ ನಾಯಕ್ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮನೆ ಕಟ್ಟಲು ಭೂಮಿ ಖರೀದಿಸಲು ಸುಮಾರು 8 ಲಕ್ಷ ಸಾಲ ಮಾಡಿದ್ದ. ಈ ಹಿನ್ನಲೆ ಹಣಕ್ಕಾಗಿ ಪುಷ್ಪಲತಾ ಧರಿಸಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಆಕೆ ವಿರೋಧಿಸಿದಾಗ, ಆಕೆಯ ಕತ್ತು ಹಿಸುಕಿ ಕೊಂ*ದಿದ್ದಾನೆ. ಬಳಿಕ ಸುಮಾರು 28 ಗ್ರಾಂನ ಕರಿಮಣಿ ಸರ ಕದ್ದಿದ್ದ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…