ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ: ಅನೈತಿಕ ಸಂಬಂಧ ಹಿನ್ನಲೆ ಪ್ರಿಯಕರನಿಂದಲೇ ಹತ್ಯೆಯಾದ ಯಮನವ್ವ!

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ಜ.14 ರಂದು ರಾತ್ರಿ ನಡೆದಿದೆ.

ಯಮನವ್ವ(40) ಕೊಲೆಯಾದ ಮಹಿಳೆ. ಶ್ರೀಶೈಲ ಪಾಟೀಲ್(67) ಕೊಲೆಗೈದ ಆರೋಪಿ. ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನೆ ಪಡೆದಿದ್ದ ಯಮನವ್ವ, ಶ್ರೀಶೈಲ ಪಾಟೀಲ್ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲದೇ ಇತ್ತೀಚೆಗೆ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಷಯ ತಿಳಿದ ನಂತರ ಇಬ್ಬರ ಮಧ್ಯೆ ತೀವ್ರವಾದ ಜಗಳ ಉಂಟಾಗಿತ್ತು. ಬಳಿಕ ಶ್ರೀಶೈಲ ಯಮನವ್ವಳ ಕಿವಿಗೆ ಬಲವಾಗಿ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆಕೆ ಉಸಿರು ನಿಂತ ಮೇಲೆ ಆಘಾತಗೊಂಡು ಮರುದಿನ ಬೆಳಿಗ್ಗೆ ಯಮನವ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಅಕ್ಕಪಕ್ಕದವರಿಗೆ ಆತನೇ ತಿಳಿಸಿದ್ದಾನೆ. ಬಳಿಕ ಮೃತದೇಹದ ಮುಂದೆ ಮೊಸಳೆ ಕಣ್ಣಿರು ಹಾಕಿದ್ದಾನೆ. ಇನ್ನು ಪೊಲೀಸರಿಗೂ ಆತನೇ ಮಾಹಿತಿ ನೀಡಿದ್ದಾನೆ. ವಿಚಾರಣೆಯ ವೇಳೆ ಆರೋಪಿಯ ಬಣ್ಣ ಬಯಲಾಗಿದ್ದು ಬಳಿಕ ಸತ್ಯ ಒಪ್ಪಿಕೊಂಡಿದ್ದಾನೆ.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!